ಉಡುಪಿ: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ನಡೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದೆ.
ನೂರಾರು ವರ್ಷಗಳ ಇತಿಹಾಸವಿರುವ ಉಡುಪಿ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಹಿಂದೂ ಸಂಪ್ರದಾಯದಂತೆ ಕೇಸರಿ ಧ್ವಜ ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಕ್ಕೆ ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉಡುಪಿ ಕಾಂಗ್ರೆಸ್ ಪಕ್ಷವು ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದು ಕಾಂಗ್ರೆಸ್ಸಿನ ಹಿಂದೂ ವಿರೋಧಿ ನೀತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಕಾಂಗ್ರೆಸ್ ಪಕ್ಷವು ತನ್ನ ಓಲೈಕೆ ರಾಜಕಾರಣಕ್ಕಾಗಿ ಬಹುಸಂಖ್ಯಾತ ಹಿಂದೂಗಳ ಪ್ರತಿ ಆಚರಣೆಗಳಿಗೆ ನಿರಂತರ ಅಡ್ಡಗಾಲು ಹಾಕುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರು ಸಿಎಂಗೆ ಬರೆದಿದ್ದಾರೆ ಎನ್ನಲಾದ ಪತ್ರದ ಪ್ರತಿಯನ್ನು ಸಾಮಾಜಿಕ ಮಾಧ್ಯಮ X ನಲ್ಲಿ ಹಂಚಿಕೊಂಡಿರುವ ಬಿಜೆಪಿ, ಪಾಕಿಸ್ಥಾನಕ್ಕೆ ಜಯಕಾರ ಹಾಕುವವರನ್ನು ಬಗಲಲ್ಲಿಟ್ಟುಕೊಳ್ಳುವ ಕಾಂಗ್ರೆಸ್ನ ದೃಷ್ಟಿಯಲ್ಲಿ ಭಗವಾಧ್ವಜ ಹಾರಿಸುವುದು ಅಪರಾಧ, ಪಾಕಿಸ್ಥಾನ ಬಾವುಟ ಹಾರಿಸಿದರೆ ಅಪರಾಧವಲ್ಲ ಎಂದು ಬರೆದುಕೊಂಡಿದೆ. ಕಾಂಗ್ರೆಸ್ ಪಕ್ಷದ ಈ ಸನಾತನ ಧರ್ಮ ವಿರೋಧಿ ನೀತಿಗೆ ತಕ್ಕ ಪಾಠವನ್ನು ರಾಜ್ಯದ ಜನತೆ ಕಲಿಸಲಿದ್ದಾರೆ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.
ನೂರಾರು ವರ್ಷಗಳ ಇತಿಹಾಸವಿರುವ ಉಡುಪಿ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಹಿಂದೂ ಸಂಪ್ರದಾಯದಂತೆ ಕೇಸರಿ ಧ್ವಜ ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಕ್ಕೆ ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉಡುಪಿ ಕಾಂಗ್ರೆಸ್ ಪಕ್ಷವು ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದು ಕಾಂಗ್ರೆಸ್ಸಿನ… pic.twitter.com/xpSj4XCMaH
— BJP Karnataka (@BJP4Karnataka) January 20, 2026
ಯಶಪಾಲ್ ಸುವರ್ಣ ಆಕ್ರೋಶ:
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಯಶಪಾಲ್ ಸುವರ್ಣ, ಭಗವಾಧ್ವಜ ಹಾರಿಸಿದ ಉಡುಪಿ ಜಿಲ್ಲಾಧಿಕಾರಿಯವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮಾನಸಿಕತೆ ಜಗಜ್ಜಾಹೀರಾಗಿದೆ ಎಂದು ವ್ಯಾಖ್ಯಾನಿಸಿದ್ದಾರೆ.
ಉಡುಪಿಯ ನಾಡಹಬ್ಬ ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ, ಜೋಡುಕಟ್ಟೆಯ ಮುಂಭಾಗದ ಭವ್ಯ ವೇದಿಕೆಯಲ್ಲಿ, ಅಷ್ಠಮಠಗಳ ಯತಿಗಳ ದಿವ್ಯ ಉಪಸ್ಥಿತಿಯಲ್ಲಿ ಮಾನ್ಯ ಉಡುಪಿ ಜಿಲ್ಲಾಧಿಕಾರಿಯವರು ಭಗವಾಧ್ವಜವನ್ನು ಹಾರಿಸುವ ಮೂಲಕ ಸಾಂಪ್ರದಾಯಿಕ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡಿದ ಬಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕು ಘಟಕವು ಜಿಲ್ಲಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಆಗ್ರಹ ಮಾಡಿದೆ. ಪ್ರತಿ ಬಾರಿ ಜಿಲ್ಲಾ ಉಸ್ತುವಾರಿ ಸಚಿವರು ಪರ್ಯಾಯ ಮೆರವಣಿಗೆಗೆ ಚಾಲನೆ ನೀಡುವುದು ವಾಡಿಕೆ. ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವರು ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮದಲ್ಲಿ ಭಾಗಿಯಾಗದ ಕಾರಣ ಅವರ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳು ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷವು ಜಿಲ್ಲಾಧಿಕಾರಿಗಳು ಭಗವಾಧ್ವಜ ಹಾರಿಸಿದ್ದನ್ನು ಮಹಾಪ್ರಮಾದ ಎಂಬಂತೆ ಬಿಂಬಿಸಿ ಜಿಲ್ಲಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಭಗವಾಧ್ವಜವನ್ನು ಹಾರಿಸಿದರು ಎಂಬ ಏಕೈಕ ಕಾರಣಕ್ಕಾಗಿ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸುವ ಮೂಲಕ ಹಿಂದೂಗಳ ಪವಿತ್ರ ಭಗವಾಧ್ವಜ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಧ್ವೇಷವಿದೆ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ. ಒಂದು ವೇಳೆ ಜಿಲ್ಲಾ ಉಸ್ತುವಾರಿ ಸಚಿವರೇ ಭಗವಾಧ್ವಜವನ್ನು ಹಾರಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡುತ್ತಿದ್ದರೆ ಕಾಂಗ್ರೆಸ್ ಪಕ್ಷವು ಅವರ ರಾಜೀನಾಮೆಗೆ ಆಗ್ರಹಿಸುತ್ತಿತ್ತೆ? ಎಂದು ಅವರು ಪ್ರಶ್ನಿಸಿದ್ದಾರೆ.
ಹಿಂದೂತ್ವ, ರಾಷ್ಟ್ರೀಯತೆ, ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದು ಉಳಿದವರ ಓಲೈಕೆಗೆ ಮುಂದಾಗಿರುವ ಕಾಂಗ್ರೆಸ್ ಪಕ್ಷದ ನಾಯಕರು ಹಿಂದೂಗಳ ಧಾರ್ಮಿಕ ಭಾವನೆ, ಭಗವಾಧ್ವಜಕ್ಕೆ ಅಪಮಾನ ಮಾಡಲು ಮುಂದಾಗಿರುವುದು ಅಕ್ಷಮ್ಯ ಎಂದಿರುವ ಅವರು, ಜಿಲ್ಲಾಧಿಕಾರಿಗಳ ವಿರುದ್ಧ ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಂಡರೆ ಉಡುಪಿಯ ಸಮಸ್ತ ಜನತೆ, ಹಿಂದೂ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸುವ ಸನ್ನಿವೇಶ ನಿರ್ಮಾಣವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಭಗವಾಧ್ವಜ ಹಾರಿಸಿದ ಉಡುಪಿ ಜಿಲ್ಲಾಧಿಕಾರಿಯವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮಾನಸಿಕತೆ ಜಗಜ್ಜಾಹೀರಾಗಿದೆ. ಉಡುಪಿಯ ನಾಡಹಬ್ಬ ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ, ಜೋಡುಕಟ್ಟೆಯ ಮುಂಭಾಗದ ಭವ್ಯ ವೇದಿಕೆಯಲ್ಲಿ, ಅಷ್ಠಮಠಗಳ ಯತಿಗಳ ದಿವ್ಯ ಉಪಸ್ಥಿತಿಯಲ್ಲಿ ಮಾನ್ಯ ಉಡುಪಿ ಜಿಲ್ಲಾಧಿಕಾರಿಯವರು… pic.twitter.com/7lHSez6CR8
— Yashpal Anand Suvarna (@YashpalBJP) January 20, 2026
























































