ಬಾಗಲಕೋಟೆ: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸ ಅವರು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮುಂದಿನ ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಪಕ್ಷವನ್ನು ಅಧಿಕೃತವಾಗಿ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಾದ್ಯಂತ ಸಾಮಾಜಿಕ ನ್ಯಾಯ, ದಲಿತರು, ಬಹುಜನರು ಹಾಗೂ ವಿವಿಧ ಜನಪರ ಹೋರಾಟಗಳಲ್ಲಿ ತೊಡಗಿರುವ ಸಂಘಟನೆಗಳನ್ನು ಒಗ್ಗೂಡಿಸಿ ಹೊಸ ರಾಜಕೀಯ ಪರ್ಯಾಯವನ್ನು ನಿರ್ಮಿಸುವ ಉದ್ದೇಶ ಹೊಂದಿದ್ದೇವೆ ಎಂದು ಚೇತನ್ ಹೇಳಿದರು. ದಲಿತ ಸಂಘಟನೆಗಳು, ಬಹುಜನ ಸಂಘಟನೆಗಳು ಹಾಗೂ ಸಮಾಜಪರ ಚಳವಳಿಗಳನ್ನು ಒಂದೇ ವೇದಿಕೆಗೆ ತಂದು ಜನರ ಧ್ವನಿಯಾಗುವ ಪಕ್ಷ ಕಟ್ಟುವ ಗುರಿಯಿದೆ ಎಂದು ಅವರು ತಿಳಿಸಿದರು.

ಈ ವೇಳೆ ತಮ್ಮ ಪಕ್ಷದ ಪ್ರಣಾಳಿಕೆಗೆ ಸಂಬಂಧಿಸಿದ 10 ಪ್ರಮುಖ ಅಂಶಗಳನ್ನು ಕೂಡ ಚೇತನ್ ಅಹಿಂಸ ಪ್ರಕಟಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನ ಅವಕಾಶ, ಸಂವಿಧಾನ ಮೌಲ್ಯಗಳ ರಕ್ಷಣೆ ಮತ್ತು ಜನಪರ ಆಡಳಿತಕ್ಕೆ ಒತ್ತು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಪಕ್ಷದ ಸಂಘಟನೆ, ನಾಯಕತ್ವ ಹಾಗೂ ಪ್ರಣಾಳಿಕೆಯ ಸಂಪೂರ್ಣ ವಿವರಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಚೇತನ್ ತಿಳಿಸಿದ್ದಾರೆ. ಹೊಸ ಪಕ್ಷದ ಘೋಷಣೆಯು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.






































































