ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರದ ಅಧ್ಯಯನ ತಂಡವನ್ನು ಕರ್ನಾಟಕಕ್ಕೆ ಕಳುಹಿಸಿ ಪರಿಸ್ಥಿತಿ ಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಬರ ನಿರ್ವಹಣೆಗೆ ಅಗತ್ಯ ನೆರವು ನೀಡುವಂತೆಯೂ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ವಾಡಿಕೆಗಿಂತ ಶೇ.30ರಷ್ಟು ಕಡಿಮೆ ಮಳೆಯಾಗಿದ್ದು, 31 ಜಿಲ್ಲೆಗಳ ಪೈಕಿ 18 ಜಿಲ್ಲೆಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 141 ತಾಲೂಕುಗಳಲ್ಲಿ ಮಳೆಯ ಅಭಾವ ಕಂಡುಬಂದಿದ್ದು, ಮುಂಗಾರು ಬಿತ್ತನೆ ಕೇವಲ ಶೇ.34ರಷ್ಟೇ ಪೂರ್ಣಗೊಂಡಿದೆ. 14 ಪ್ರಮುಖ ಜಲಾಶಯಗಳಲ್ಲಿ ಕೇವಲ ಶೇ.34ರಷ್ಟು ನೀರಿನ ಸಂಗ್ರಹವಿರುವುದರಿಂದ ಕೃಷಿ, ಕುಡಿಯುವ ನೀರು ಹಾಗೂ ಗ್ರಾಮೀಣ ಜೀವನೋಪಾಯದ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರದ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಮೌಲ್ಯಮಾಪನ ಮಾಡಿದರೆ, ರೈತರಿಗೆ ಕೇಂದ್ರ ಸರ್ಕಾರ ತಮ್ಮೊಂದಿಗಿದೆ ಎಂಬ ವಿಶ್ವಾಸ ಮೂಡಲಿದೆ ಎಂದು ಸಿಎಂ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಈಗಾಗಲೇ ನೀರಿನ ಸಂರಕ್ಷಣೆ ಸೇರಿದಂತೆ ತುರ್ತು ಕ್ರಮಗಳನ್ನು ಕೈಗೊಂಡಿದ್ದು, ರೈತರು ಮತ್ತು ಬರಪೀಡಿತ ಕುಟುಂಬಗಳೊಂದಿಗೆ ಸರ್ಕಾರ ದೃಢವಾಗಿ ನಿಂತಿದೆ ಎಂದು ತಿಳಿಸಿದ್ದಾರೆ.
I have written to Hon’ble Prime Minister Shri @narendramodi seeking urgent intervention in view of the emerging drought situation in Karnataka.
The State has recorded a significant monsoon deficit, delayed kharif sowing, low reservoir storage and increasing stress on… pic.twitter.com/C6TG0lFUjI
— DK Shivakumar (@DKShivakumar) July 14, 2026







































































