ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆಯ ಪ್ರಗತಿ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ಪಡೆದರು.
ನವದೆಹಲಿಯ ಕರ್ನಾಟಕ ಭವನದಲ್ಲಿರುವ ನಿವಾಸಿ ಆಯುಕ್ತರಿಂದ ರಕ್ಷಣಾ ಕಾರ್ಯಾಚರಣೆಯ ಕುರಿತು ಸಮಗ್ರ ಮಾಹಿತಿ ಪಡೆದ ಅವರು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ 54 ಮಂದಿ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ ಎಂದು ಶಿವಕುಮಾರ್ ಮಾಹಿತಿ ನೀಡಿದ್ದಾರೆ.

‘ಕುಟುಂಬಸ್ಥರು ಆತಂಕಪಡಬೇಡಿ’
ನೇಪಾಳದಲ್ಲಿ ಸಿಲುಕಿರುವವರ ಕುಟುಂಬಸ್ಥರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸರ್ಕಾರ ಸಂತ್ರಸ್ತರ ಕುಟುಂಬಗಳೊಂದಿಗೆ ನಿಂತಿದ್ದು, ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಮುಂದುವರಿಸಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.







































































