ಬೆಂಗಳೂರು: ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಅವರನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿರುವುದನ್ನು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಖಚಿತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಾಹಿತಿ ಒದಗಿಸಿದ ಬಿ.ದಯಾನಂದ್, ಈ ಚಿತ್ರದುರ್ಗ ಮೂಲದ ರೇಣುಕಾಚಾರ್ಯ ಎಂಬ ವ್ಯಕ್ತಿಯ ಕೊಲೆ ನಡೆದಿತ್ತು. ಬೆಂಗಳೂರಿನ ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ಪತ್ತೆಯಾದ ಶವದ ಬಗ್ಗೆ ದಾಖಲಾಗಿರುವ ಪ್ರಕರಣ ಹಿನ್ನೆಲೆ ಕೆಲವರನ್ನು ಬಂಧಿಸಲಾಗಿದೆ. ಜೊತೆಗೆ ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.