ಪೂಂಚ್: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಉಗ್ರರು ಭಾರೀ ವಿಧ್ವಂಸಕ್ಕೆ ಸಂಚು ರೂಪಸಿದ್ದಾರೆ. ಉಗ್ರರ ವಿರುದ್ದ ಶನಿವಾರ ಸೇನೆ ಕಾರ್ಯಾಚರಣೆಗೆ ಇಳಿದ ಸಂದರ್ಭದಲ್ಲಿ ಭಾರೀ ಗುಂಡಿನಕಾಳಗ ನಡೆದಿದೆ.
ಪೂಂಚ್ ಜಿಲ್ಲೆಯ ಸುರಾನ್ ಕೋಟೆ ಎಂಬಲ್ಲಿ ಶನಿವಾತ ವಾಯುಪಡೆಯ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಈ ವಿಧ್ವಂಸದಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ನಾಲ್ವರು ವಾಯುಪಡೆ ಯೋಧರು ಗಾಯಗೊಂಡಿದ್ದಾರೆ.
ಇಬ್ಬರು ಉಗ್ರರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದ್ದು, ಈ ದಾಳಿಯ ನಂತರ ಕಣಿವೆ ರಾಜ್ಯದಲ್ಲಿ ಸೇನೆ ಕ್ಷಿಪ್ರ ಕಾರ್ಯಾಚರಣೆಗಿಳಿದಿದೆ. ಪೂಂಚ್ ಜಿಲ್ಲೆಯಲ್ಲಿ ಸೇನೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದು, ಪಹರೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.