ನವದೆಹಲಿ: ಮಾರಣಾಂತಿಕ ಕೊರೋನಾ ವೈರಾಣು ಹಾವಳಿಯಿಂದ ಪಾರಾಗಲು ಲಸಿಕೆ ಹಾಕಿಸಿಕೊಂಡ ಜನರಲ್ಲಿ ಇದೀಗ ಗೊಂದಲ ಸೃಷ್ಟಿಯಾಗದೆ. ಕೊರೋನಾ ಸೋಂಕು ತಡೆಯಲು ಬಳಸಲಾಗಿರುವ ಕೋವಿಶಿಲ್ಡ್ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಈ ರೀತಿಯ ಆತಂಕ ಸೃಷ್ಟಿಯಾಗಿದೆ.
ಈ ಕುರಿತ ವರದಿಗಳ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ‘ಲಸಿಕೆ ತಯಾರಿಕಾ ಕಂಪನಿಗಳಿಂದ ರಾಜಕೀಯ ದೇಣಿಗೆ ಪಡೆಯಲು ಬಿಜೆಪಿ ಜನರ ಜೀವವನ್ನೇ ಅಡವಿಟ್ಟಿತು’ ಎಂದು ಅಕ್ರೊಶ ಹೊರಹಾಕಿದ್ದಾರೆ.
ಸುಮಾರು 80 ಕೋಟಿ ಭಾರತೀಯರಿಗೆ ಕೋವಿಶಿಲ್ಡ್ ಲಸಿಕೆ ನೀಡಲಾಗಿದೆ. ಲಸಿಕೆಯಿಂದ ಹೃದಯಾಘಾತ ಸಂಭವಿಸುವ ಸಾಧ್ಯತೆ ಇದೆ ಎಂದು ತಯಾರಕ ಕಂಪನಿ ಹೇಳಿದೆ ಎಂದು ಗಮನಸೆಳೆದಿರುವ ಅಖಿಲೇಶ್, ಇಂಥ ಮಾರಕ ಔಷಧಗಳಿಗೆ ಅನುಮತಿ ನೀಡುವ ಮೂಲಕ ಕೋಲೆ ಸಂಚು ನಡೆದಿದೆ ಎಂದು ಆರೋಪಿಸಿದ್ದಾರೆ. ಕೋವಿಶೀಲ್ಡ್ ಬಗ್ಗೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.