ಬೆಂಗಳೂರು: ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಉಳಿದೊಟ್ಟು ಅಧಿಕಾರ ವಹಿಸಿಕೊಂಡಿದ್ದಾರೆ.
ಸದಾಶಯ ಬಳಗದ ಶೆಟ್ಟರು ಎಂದೇ ಗುರುತಾಗಿರುವ ಕರಾವಳಿಯ ಬಿಜೆಪಿ ನಾಯಕ ರವೀಂದ್ರ ಶೆಟ್ಟಿ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಆಶೀರ್ವಾದ ಪಡೆದು, ಬೆಂಗಳೂರಿನ ವಸಂತನಗರದಲ್ಲಿರುವ ಬಳಿಕ ದೇವರಾಜ ಅರಸು ಸಭಾಭವನದಲ್ಲಿ ನಿಗಮದ ನೂತನ ಸಾರಥಿಯಾಗಿ ಅಧಿಕಾರ ವಹಿಸಿಕೊಢರು.
ಬಿಜೆಪಿಯಲ್ಲಿನ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ಕೊಡಿಸುವ ಪ್ರಯತ್ನ ಬಿಜೆಪಿಯಿಂದ ನಡೆಯುತ್ತಿದ್ದು, ಈ ಪ್ರಕ್ರಿಯೆ ಮೂಲಕ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರನ್ನು ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಬಿಎಸ್ವೈ ಸರ್ಕಾರ ನೇಮಕ ಮಾಡಿದೆ.