ಚಾಮರಾಜನಗರ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಶ್ರೀ ಮಹದೇಶ್ವರ ಸಂಸ್ಕೃತ ಪಾಠಶಾಲೆ ಹೊಸಪಾಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಆಸ್ಮಕಂ ಸಂಸ್ಕೃತಂ ಕಾರ್ಯಕ್ರಮವನ್ನು ಬೈಲೂರಿನ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.
ಬೈಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಮಹದೇವಸ್ವಾಮಿ ಮಾತನಾಡಿ ಸಂಸ್ಕೃತ ಭಾಷೆಯನ್ನು ಅಧ್ಯಯನ ಮಾಡುವುದರಿಂದ ಜ್ಞಾನ ಶಕ್ತಿ ಹೆಚ್ಚಿಸುತ್ತದೆ ಕಲಿಕೆಯ ದೃಷ್ಠಿಯಿಂದ ಅನುಕೂಲವಾಗುವುದು , ಸಂಸ್ಕಾರ ಸಂಸ್ಕೃತಿಗಳ ಬಗ್ಗೆ ಹೆಚ್ಚು ಅರಿವು ಮೂಡುತ್ತದೆ ಎಂದರು.
ಆಂಗ್ಲ ಭಾಷಾ ಶಿಕ್ಷಕರಾದ ಅರುಣ್ ಸೆಲ್ವಕುಮಾರ್ ಮಾತನಾಡಿ ಮಾತೃಭಾಷೆಯ ಜೊತೆಗೆ ನಮ್ಮೊಡನೆ ಇರುವ ಸಂಸ್ಕೃತ ಭಾಷೆಯನ್ನು ಉಳಿಸಿ ರಚಿಸಬೇಕು ಸಂಸ್ಕೃತ ಅಧ್ಯಯನದಿಂದ ಉತ್ತಮ ಸನ್ಮಾರ್ಗ ಜ್ಞಾನ ದೊರೆಯುತ್ತದೆ ಎಂದರು.
ಈ ಸಂದರ್ಭದಲ್ಲಿ ರವಿಕುಮಾರ್, ಮುಖ್ಯ ಶಿಕ್ಷಕರು ಸಂಸ್ಕೃತ ಪಾಠಶಾಲೆ ಹೊಸ ಪಾಳ್ಯ ಹಾಗೂ ಶಿಕ್ಷಕರುಗಳಾದ ಮಲ್ಲಿಕಾರ್ಜುನ ಸ್ವಾಮಿ ವೈಎನ್, ನಾಗಮಣಿ ಪಿ , ವಿದ್ಯಾರ್ಥಿಗಳು ಇನ್ನಿತರರು ಹಾಜರಿದ್ದರು.