ಅಯೋಧ್ಯೆ: ಲೋಕಾರ್ಪಣೆಗೆ ಸಜ್ಜಾಗಿರುವ ಅಯೋಧ್ಯೆ ಶ್ರೀರಾಮ ದೇಗುಲಕ್ಕೆ ಕರ್ನಾಟಕ ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತತನೆಯ ವಿಗ್ರಹವನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಆಯ್ಕೆ ಮಾಡಿದೆ. ಮಕರ ಸಂಕ್ರಾಂತಿ ಸಂದರ್ಭದಲ್ಲಿ ಟ್ರಸ್ಟ್ ಈ ಬಗ್ಗೆ ಮಹತ್ವದ ಘೋಷಣೆ ಮಾಡಿದೆ .
ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಮಾಹಿತಿ ಹಂಚಿಕೊಂಡಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್, ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೃಷ್ಣಶಿಲೆಯಲ್ಲಿ ಕೆತ್ತಿರುವ ವಿಗ್ರಹವನ್ನು ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದು ಪ್ರಕಟಿಸಿದೆ. ಈ ಮೂಲಕ ಅಯೋಧ್ಯೆಗೂ ಕರ್ನಾಟಕಕ್ಕೂ ಅಪೂರ್ವ ಸಂಬಂಧವೊಂದು ಬೆಸೆದಂತಾಗಿದೆ.
कर्नाटक के प्रसिद्ध मूर्तिकार श्री अरुण योगीराज द्वारा कृष्णशिला पर निर्मित मूर्ति का चयन भगवान श्री रामलला सरकार के श्री विग्रह के रूप में प्रतिष्ठित होने हेतु किया गया है।
The Murti sculpted on Krishna Shila, by renowned sculptor Shri Arun Yogiraj, has been selected as Shri…
— Shri Ram Janmbhoomi Teerth Kshetra (@ShriRamTeerth) January 15, 2024


























































