ಬೆಂಗಳೂರು: ಸಾಲು ಸಾಲು ಹಗರಣಗಳ ಆರೋಪಗಳ ಹೊಡೆತಕ್ಕೆ ಸಿಲುಕಿರುವ ಬಸವರಾಜ್ ಬೊಮ್ಮಾಯಿ ಸರ್ಕಾರಕ್ಕೆ ಇದೀಗ ತೀವ್ರ ಮುಜುಗರದ ಸನ್ನಿವೇಶಗಳೇ ಎದುರಾಗುತ್ತಿದೆ. ಈ ನಡುವೆ ಲಂಚಾವತಾರದ ಸನ್ನಿವೇಶಗಳು ಬೆಳಕಿಗೆ ಬರುತ್ತಿದ್ದಂತೆಯೇ ಎಚ್ಚೆತ್ತ ಬೊಮ್ಮಾಯಿ ಸರ್ಕಾರ ಶುಕ್ರವಾರ ಗೊಂದಲದ ನಿರ್ಧಾರ ಕೈಗೊಂಡು ಬಿಜೆಪಿ-ಆರೆಸ್ಸೆಸ್ ನಾಯಕರನ್ನೇ ಗಲಿಬಿಲಿಗೊಳಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೊಟೋ-ವೀಡಿಯೋ ಚಿತ್ರೀಕರಣ ಮಾಡಬಾರದೆಂಬ ಆದೇಶ ಬಗ್ಗೆ ಸಾರ್ವಜನಿಕರು ಗೇಲಿ ಮಾಡಿದ್ದು ಇದರಿಂದ ಮುಜುಗರಕ್ಕೀಡಾದ ಸರ್ಕಾರ ರಾತ್ರೋ ರಾತ್ರಿ ಈ ಆದೇಶವನ್ನು ಹಿಂಪಡೆದಿದೆ.
ಜಿಂದಾಲ್ ಭೂ ಅಕ್ರಮ, ಕೋವಿಡ್ ಪರಿಹಾರದಲ್ಲಿನ ಗೋಲ್ಮಾಲ್, ಕೆಆರ್ಐಡಿಎಲ್ ಕರ್ಮಕಾಂಡ ಸಹಿತ ಸಾಲು ಸಾಲು ಹಗರಣಗಳ ಆರೋಪಗಳು ಬಿಜೆಪಿ ಪಾಲಿಗೆ ಸವಾಲೆಂಬಂತಾಗಿದೆ. ಇದೇ ವೇಳೆ, ಶೇ 40 ಕಮೀಷನ್ ಆರೋಪ ಕುರಿತ ಗುತ್ತಿಗೆದಾರರ ಸಂಘದ ದೂರು ಪ್ರತಿಪಕ್ಷಗಳಿಗೂ ಆಹಾರ ಎಂಬಂತಾಗಿದೆ. ಇದರ ಬೆನ್ನಲ್ಲೇ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಎಡಿಜಿಪಿ ಸಹಿತ ಹಿರಿಯ ಅಧಿಕಾರಿಗಳೇ ಬಂಧನಕ್ಕೊಳಗಾಗಿದ್ದು, ಸಚಿವರಾದಿಯಾಗಿ ಇನ್ನೂ ಅನೇಕರ ತಲೆದಂಡಕ್ಕೆ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಇದೇ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳಲ್ಲಿನ ಲಂಚಾವತಾರ ಪ್ರಕರಣಗಳ ಬಗ್ಗೆ ಸಾರ್ವಜನಿಕರೂ ಹಿಡಿಶಾಪ ಹಾಕುತ್ತಿದ್ದಾರೆ. ಈ ಬೆಳವಣಿಗೆಯಿಂದ ಗಲಿಬಿಲಿಗೊಂಡಿರುವ ಬೊಮ್ಮಾಯಿ ಸರ್ಕಾರ ಏಕಾಏಕಿ ಸರ್ಕಾರಿ ಕಚೇರಿಗಳಲ್ಲಿ ಫೊಟೋ ವೀಡಿಯೋ ಚಿತ್ರೀಕರಣ ನಿಷೇಧಿಸಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಈ ಆದೇಶ ಆರೆಸ್ಸೆಸ್ ಕಾರ್ಯಕರ್ತರ ಸಹಿತ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ. ಅದರಲ್ಲೂ ಶೇ 40 ಕಮೀಷನ್ ಆರೋಪದಿಂದ ಪಾರಾಗಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕಮೆಂಟ್ಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
ಜೆಡಿಎಸ್ ತರಾಟೆ:
ಸರಕಾರಿ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರು, ಖಾಸಗಿ ವ್ಯಕ್ತಿಗಳು ಅನುಮತಿ ಇಲ್ಲದೇ ವಿಡಿಯೋ ಚಿತ್ರಿಕರಣ ಮಾಡುವಂತಿಲ್ಲ ಎಂಬ ಆದೇಶ ಬಗ್ಗೆ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 40% ಕಮೀಷನ್ ಆರೋಪದ ಪ್ರತಿಧ್ವನಿ ಇದಾಗಿದೆ ಎಂದು ಆರೋಪಿಸಿರುವ ಜೆಡಿಎಸ್ ನಾಯಕ ಬಂಡೆಪ್ಪ ಕಾಶೆಂಪೂರ್, ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್ ಅಸ್ತ್ರಕ್ಕೆ ಬೆಚ್ಚಿತೇ ಸರ್ಕಾರ?
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ/ವಿಡಿಯೋ ದೃಶ್ಯ ಮಾಡುವುದನ್ನು ಸರ್ಕಾರ ನಿಷೇಧಿಸಿದ ನಡೆಯನ್ನು ಕಾಂಗ್ರೆಸ್ ಖಂಡಿಸಿದೆ. ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಲು ಈ ನಿಷೇಧವೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಶಾಸಕ ದಿನೇಶ್ ಗುಂಡೂರಾವ್, ಸರ್ಕಾರಿ ಕಚೇರಿಗಳು ಭ್ರಷ್ಟರ ತಾಣವಾಗಿವೆ. ಸಾರ್ವಜನಿಕರು ಇತ್ತೀಚೆಗೆ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಮೊಬೈಲ್ ಮೂಲಕ ಬಯಲಿಗೆಳೆದಿದ್ದಾರೆ. ಇದು ಅಪಥ್ಯವೇ? ಎಂದು ಪ್ರಶ್ನಿಸಿದ್ದಾರೆ.
1
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ/ವಿಡಿಯೋ ದೃಶ್ಯ ಮಾಡುವುದನ್ನು ಸರ್ಕಾರ ನಿಷೇಧಿಸಿದೆ.
ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಲು ಈ ನಿಷೇಧವೆ?
ಸರ್ಕಾರಿ ಕಚೇರಿಗಳು ಭ್ರಷ್ಟರ ತಾಣವಾಗಿವೆ. ಸಾರ್ವಜನಿಕರು ಇತ್ತೀಚೆಗೆ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಮೊಬೈಲ್ ಮೂಲಕ ಬಯಲಿಗೆಳೆದಿದ್ದಾರೆ.
ಇದು ಅಪಥ್ಯವೇ?— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 15, 2022
ಈ ಸರ್ಕಾರ ಕೆಲ ಭ್ರಷ್ಟ ಅಧಿಕಾರಿಗಳೊಂದಿಗೆ ಶಾಮೀಲಾಗಿ 40% ಕಮೀಷನ್ ಹೊಡೆಯುತ್ತಿದೆ. ಸರ್ಕಾರದ ಅನೇಕ ಇಲಾಖೆಗಳು ಸಾರ್ವಜನಿಕರನ್ನು ಸುಲಿಗೆ ಮಾಡುವ ವಸೂಲಿ ಕೇಂದ್ರಗಳಾಗಿವೆ.
ಸರ್ಕಾರ ಭ್ರಷ್ಟ ಅಧಿಕಾರಿಗಳಿಗೆ ಕಡಿವಾಣ ಹಾಕುವ ಕೆಲಸ ಮಾಡಬೇಕು. ಅದು ಬಿಟ್ಟು ಫೋಟೋ-ವಿಡಿಯೋ ನಿಷೇಧ ಭ್ರಷ್ಟಾಚಾರಕ್ಕೆ ಲೈಸೆನ್ಸ್ ಕೊಟ್ಟಂತೆ. ಇದು ಭ್ರಷ್ಪಪರ ಸರ್ಕಾರ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
2
ಈ ಸರ್ಕಾರ ಕೆಲ ಭ್ರಷ್ಟ ಅಧಿಕಾರಿಗಳೊಂದಿಗೆ ಶಾಮೀಲಾಗಿ 40% ಕಮೀಷನ್ ಹೊಡೆಯುತ್ತಿದೆ.
ಸರ್ಕಾರದ ಅನೇಕ ಇಲಾಖೆಗಳು ಸಾರ್ವಜನಿಕರನ್ನು ಸುಲಿಗೆ ಮಾಡುವ ವಸೂಲಿ ಕೇಂದ್ರಗಳಾಗಿವೆ.
ಸರ್ಕಾರ ಭ್ರಷ್ಟ ಅಧಿಕಾರಿಗಳಿಗೆ ಕಡಿವಾಣ ಹಾಕುವ ಕೆಲಸ ಮಾಡಬೇಕು.
ಅದು ಬಿಟ್ಟು ಫೋಟೋ-ವಿಡಿಯೋ ನಿಷೇಧ ಭ್ರಷ್ಟಾಚಾರಕ್ಕೆ ಲೈಸೆನ್ಸ್ ಕೊಟ್ಟಂತೆ. ಇದು ಭ್ರಷ್ಪಪರ ಸರ್ಕಾರ.— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 15, 2022
ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಅಕ್ರಮಗಳನ್ನು ಬಯಲಿಗೆಳೆದು ಜನರೇ ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುತ್ತಿದ್ದಾರೆ. ಇದು ಪಾರದರ್ಶಕ ಸರ್ಕಾರವಾಗಿದ್ದರೆ ಹೀಗೆ ಅಕ್ರಮ ಬಯಲಿಗೆಳೆಯುವ ಜನರ ಬೆನ್ನಿಗೆ ನಿಲ್ಲಬೇಕು. ಆದರೆ ಬೊಮ್ಮಾಯಿ ಸರ್ಕಾರ ನಿಂತಿರುವುದು ಯಾರ ಬೆನ್ನಿಗೆ? ಎಂದು ಪ್ರಶ್ನಿಸಿರು ದಿನೇಶ್ ಗುಂಡೂರಾವ್, ಭ್ರಷ್ಟರ ರಕ್ಷಣೆಗೆ ನಿಂತಿರುವ ಈ ಸರ್ಕಾರದಿಂದ ಏನು ನಿರೀಕ್ಷಿಸಲು ಸಾಧ್ಯ ಎಂದಿದ್ದಾರೆ.
3
ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಅಕ್ರಮಗಳನ್ನು ಬಯಲಿಗೆಳೆದು ಜನರೇ ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುತ್ತಿದ್ದಾರೆ.
ಇದು ಪಾರದರ್ಶಕ ಸರ್ಕಾರವಾಗಿದ್ದರೆ ಹೀಗೆ ಅಕ್ರಮ ಬಯಲಿಗೆಳೆಯುವ ಜನರ ಬೆನ್ನಿಗೆ ನಿಲ್ಲಬೇಕು.
ಆದರೆ ಬೊಮ್ಮಾಯಿ ಸರ್ಕಾರ ನಿಂತಿರುವುದು ಯಾರ ಬೆನ್ನಿಗೆ?
ಭ್ರಷ್ಟರ ರಕ್ಷಣೆಗೆ ನಿಂತಿರುವ ಈ ಸರ್ಕಾರದಿಂದ ಏನು ನಿರೀಕ್ಷಿಸಲು ಸಾಧ್ಯ?— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 15, 2022







































































