ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ‘ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್’ನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಾಜೇಶ್ ಕೆ.ಎಸ್. ಅವರಿಗೆ ವಿವಿ ವತಿಯಿಂದ ಪಿಹೆಚ್ಡಿ ಪದವಿ ನೀಡಿ ಗೌರವಿಸಲಾಗಿದೆ.
ಯುವಿಸಿಇ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ.ಕೆ.ವಿ.ಎಸ್.ಬಿ. ರಾಜು ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಲ್ಯಾಟರಲ್ ಲೋಡ್ ರೆಸಿಸ್ಟನ್ಸ್ ಆಫ್ ವೇರಿಯಸ್ ಡೀಪ್ ಫೌಂಡೇಶನ್ ಎಲಿಮೆಂಟ್ಸ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕಾಗಿ ರಾಜೇಶ್ ಕೆ.ಎಸ್. ಅವರಿಗರ ಪಿಎಚ್ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.




















































