ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾರ್ಥಿ ಶಶಿಕುಮಾರ್ಗೆ ಅತ್ಯುತ್ತಮ ಲೇಖನದ ‘ಗೌರವ ಪ್ರಶಸ್ತಿ’ ಸಿಕ್ಕಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಶಶಿಕುಮಾರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ವತಿಯಿಂದ ಜಂಟಿ ಸಹಯೋಗದೊಂದಿಗೆ ಆಯೋಜಿಸಲಾದ “ಭಾರತದ ಸಮಕಾಲೀನ ಸವಾಲುಗಳು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಚಿಂತನೆಗಳು” ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು.
ಇದರ ಅಂಗವಾಗಿ ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುವ (Research Scholar) ಅತ್ಯುತ್ತಮ ಸಂಶೋಧನಾ ಲೇಖನ : 2021-2022 ಸಾಲಿನ ಪುರಸ್ಕಾರಕ್ಕೆ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಎನ್. ಸಂಜೀವ್ ರಾಜ್ ರವರ ಮಾರ್ಗದರ್ಶನದಲ್ಲಿ ಪೂರ್ಣಾವಧಿ ಸಂಶೋಧನೆಯನ್ನು ಅಧ್ಯಯನ ಮಾಡುತ್ತಿರುವ ಸಂಶೋಧನಾ ವಿದ್ಯಾರ್ಥಿ ಶಶಿಕುಮಾರ್ ಪಿ. ಅವರಿಗೆ ನೀಡಲಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರ ಡಾ.ಸಿ.ಶ್ರೀನಿವಾಸ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ಎಚ್ ಹಾಗೂ ಕೇಂದ್ರದ ನಿರ್ದೇಶಕ ಡಾ. ಹೊನ್ನು ಸಿದ್ದಾರ್ಥ ಸಿ.ಬಿ, ವಿತ್ತಾಧಿಕಾರಿ ಅಜಿತ್ ಕುಮಾರ್ ಹೆಗ್ಡೆ, ಡಾ. ಪಿ.ಸಿ. ನಾಗೇಶ್, ಡಾ. ನಾಗರತ್ಮಮ್ಮ, ಡಾ. ಮುರಳೀಧರ್ ಬಿ.ಎಲ್, ಮತ್ತಿತರರು ಸಮ್ಮುಖದಲ್ಲಿ ಶಶಿಕುಮಾರ್ ಅವರಿಗೆ 10.000 ರೂ ನಗದು ಪುರಸ್ಕಾರ, ಸ್ಮರಣಿಕೆ ನೀಡಿ ಗೌರವಿಸಲಾಯಿತು.