ಮಂಗಳೂರು: ಬಂಟ್ವಾಳ ಪುರಸಭಾ ವ್ಯಾಪ್ತಿಯ. ಜಕ್ರಿಬೆಟ್ಟು ಬಳಿ ವೆಂಟೆಡ್ ಡ್ಯಾಂ ಮತ್ತು ನರಿಕೊಂಬು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ , ಬ್ಯಾರೇಜ್ ನಿರ್ಮಾಣದ ಶಾಸಕರ ಪ್ರಸ್ತಾವನೆ ಕುರಿತು ರಾಜ್ಯ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾದುಸ್ವಾಮಿ ಅವರು ಬಂಟ್ವಾಳ ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಈ ಯೋಜನೆಯ ಸಾಧ್ಯತೆ ಹಾಗೂ ಪ್ರಯೋಜನಗಳ ಕುರಿತು ಸಚಿವರಿಗೆ ವಿವರಿಸಿದರು. ಸಚಿವರು ಸಂಬಂಧ ಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಯೋಜನೆ ಕಾರ್ಯಗತವಾಗಲು ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಮತ್ತು ರವೀಶ್ ಶೆಟ್ಟಿ ಕರ್ಕಳ, ಕಾರ್ಯದರ್ಶಿಗಳಾದ ರಮಾನಾಥ ರಾಯಿ ಮತ್ತು ಪುರುಷೋತ್ತಮ ಶೆಟ್ಟಿ, ಬಿಜೆಪಿ ಪ್ರಮುಖರಾದ ಪುಷ್ಪರಾಜ್ ಚೌಟ, ಕೇಶವ ದೈಪಲ, ಯಶೋಧರ ಕರ್ಬೆಟ್ಟು,ಮುಂತಾದವರು ಜೊತೆಗಿದ್ದರು.