ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ದ ರೈತ ಸಂಘಟನೆಗಳು, ಪ್ರತಿಪಕ್ಷಗಳು ಸಿಡಿದೆದ್ದಿವೆ. ಕೃಷಿ ಕಾಯ್ದೆ ವಿರೋಧಿಸಿ ಸುದೀರ್ಘ ಹೋರಾಟದ ನಂತರ ಇಂದು ಮತ್ತೆ ಭಾರತ್ ಬಂದ್ ಮೂಲಕ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತವಾಯಿತು.
ಕರ್ನಾಟಕ ಕಿಸಾನ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಬಾರತ್ ಬಂದ್ ಬೆಂಬಲಿಸಿ ಹೋರಾಟ ನಡೆಯಿತು. ಪ್ರತಿಭಟನೆ ನಿರತರನ್ನು ಪೊಲೀಸರು ಬಂಧಿಸಿದರು.
ಭಾರತ್ ಬಂದ್ ಕರೆ ಬೆಂಬಲಿಸಿ ರಾಜ್ಯದಲ್ಲೂ ಪ್ರತಿಭಟನೆ ನಡೆದವು. ಕೆಪಿಸಿಸಿ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಚಿನ್ ಮಿಗಾ ಅವರ ಕರೆಯಂತೆ ಜಿಲ್ಲಾ ಕೇಂದ್ರಗಳಲ್ಲಿ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಳಗಾವಿಯಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದ ಕಿಸಾನ್ ಕಾಂಗ್ರೆಸ್ ಪದಾದಿಕಾರಿಗಳನ್ನು ಪೊಲೀಸರು ಬಂಧಿಸಿದರು. ಬಂಧನಕ್ಕೆ ಒಳಗಾದ ಕಾಂಗ್ರೆಸ್ ಮುಖಂಡರು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.