ಬೀದರ್: ಉಪಚುನಾವಣೆ ನಡೆಯುತ್ತಿರುವ ಬಸವಜಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಭರಾಟೆ ಬಿರುಸುಗೊಂಡಿದೆ. ಬಸವಕಲ್ಯಾಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮೂಲಕ ಅಖಾಡದಲ್ಲಿ ಗಮನಸೆಳೆದಿದೆ.
ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶರಣು ಸಲಗರ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಬೀದರ್ ಸಂಸದ ಭಗವಂತ್ ಖೂಬಾ, ಸಚಿವ ಪ್ರಭು ಚವ್ಹಾಣ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.