ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ತೊರೆದು ಕೆಪಿಸಿಸಿ ಭಾರತ್ ಜೋಡೋ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವರಾದ ಡಾ ಜಿ ಪರಮೇಶ್ವರ, ಕೆ ಎನ್ ರಾಜಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ, ಮಾಜಿ ಸಚಿವ ವೆಂಕಟರಮಣಪ್ಪ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
© 2020 Udaya News – Powered by RajasDigital.







































































