ಬೆಂಗಳೂರು: ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಮುಂದಿಟ್ಟು ರಾಜ್ಯ ಬಿಜೆಪಿ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ ರಾಜ್ಯ ಬಿಜೆಪಿಯಲ್ಲೇ ವಂಶವಾಹಿ ಅಧಿಕಾರ ಇದೆ ಎಂಬುದನ್ನು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೊಟ್ಟು ಮಾಡಿದ್ದಾರೆ. ತಮ್ಮನ್ನು ಲಕ್ಕಿಡಿಪ್ ಮುಖ್ಯಮಂತ್ರಿ ಎಂದು ಆಗಾಗ್ಗೆ ಟೀಕಿಸುತ್ತಿರುವ ಎದುರಾಳಿ ಪಕ್ಷದ ನಾಯಕರಿಗೆ ತಮ್ನದೇ ಶೈಲಿಯಲ್ಲಿ ಎದುರೇಟು ನೀಡಿದ ಹೆಚ್ಡಿಕೆ, ಹೌದು ನಾನು ಲಕ್ಜಿಡಿಪ್ ಸಿಎಂ. ಆದರೆ ಏನೀಗ ಎಂದು ಪ್ರಶ್ನಿಸಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು ಬಿಜೆಪಿ ನಾಯಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ.
2/8— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 6, 2022
ಲಕ್ಕಿಡಿಪ್ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದಿರುವ ಕುಮಾರಸ್ವಾಮಿ, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು! ʼಮಿಷನ್ ದಕ್ಷಿಣ್ʼ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ ಎಂದಿದ್ದಾರೆ.
ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ. 5/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 6, 2022
ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ ಎಂದು ಬಿಜೆಪಿಯನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ;
1.ಯಡಿಯೂರಪ್ಪ & ಸನ್ಸ್
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್ ಸೋಮಣ್ಣ
5.ಅರವಿಂದ ಲಿಂಬಾಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್
7.ಜಗದೀಶ ಶೆಟ್ಟರ್-ಪ್ರದೀಪ್ ಶೆಟ್ಟರ್
6/8— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 6, 2022
ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ;
1.ಯಡಿಯೂರಪ್ಪ & ಸನ್ಸ್
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್ ಸೋಮಣ್ಣ
5.ಅರವಿಂದ ಲಿಂಬಾಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್
7.ಜಗದೀಶ ಶೆಟ್ಟರ್-ಪ್ರದೀಪ್ ಶೆಟ್ಟರ್
8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್
7/8— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 6, 2022
8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್
ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. 'ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ' ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ?
ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ 'ಪರಿವಾರಕೋಟಿ'ಯನ್ನೇ ಬರೆಯಬಹುದು.
8/8— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 6, 2022
ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ?
ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ ‘ಪರಿವಾರಕೋಟಿ’ಯನ್ನೇ ಬರೆಯಬಹುದು ಎಂದವರು ಹೇಳಿದ್ದಾರೆ.






















































