ಲುಖ್ನೋ: ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಭಾನುವಾರ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಭಾರ್ವಾರಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಸ್ಫೋಟದ ತೀವ್ರತೆಗೆ ಕಟ್ಟಡ ನಾಶವಾಗಿದ್ದು ಅವಶೇಗಳಡಿ ಹಲವು ಸಿಲುಕಿದ್ದರು. ಅವಶೇಷಗಳಡಿಯಿಂದ ವ್ಯಕ್ತಿಗಳನ್ನು ಹೊರತೆಗೆಯಲು ರಕ್ಷಣಾ ತಂಡ ಹರಸಾಹಸ ನಡೆಸಿದೆ.
ದುರಂತ ಬಗ್ಗೆ ನೋವು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಕ್ಷಣಾ ಪರಿಹಾರ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.