ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟವನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೊಂಡಾಡಿದ್ದಾರೆ.
ಬೆಂಗಳೂರಿನಲ್ಲಿ ಬಿಎಸ್ಪಿ ಶಾಸಕ ಮಹೇಶ್ ಅವರ ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ಸಿಎಂ ಬಸವಾರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಮಾನತೆಯಿಂದ ಕೂಡಿದೆ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಂಪುಟ ರಚನೆಯಾಗಿದೆ ಎಂದು ಬಣ್ಣಿಸಿದರು.
ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತೇವೆ. ಈ ಮೂಲಕ ಬಹಳಷ್ಟು ನಾಯಕರನ್ನು ಪಕ್ಷಕ್ಕೆ ಸೇರಿಲಿಕೊಳ್ಳಲಿದ್ದೇವೆ. ಮುಂದಿನ ಚುನಾವಣೆಯಲ್ಲಿ 135- 140 ಸ್ಥಾನ ಗೆಲ್ಲುತ್ತೇವೆ ಎಂದವರು ಹೇಳಿದರು.
ಮಹೇಶ್ ಸೇರ್ಪಡೆಯಿಂದ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂದ ಬಿಎಸ್ವೈ, ಇಡೀ ರಾಜ್ಯ ಸುತ್ತಿ ಪಕ್ಷ ಕಟ್ಟುತ್ತೇವೆ. ನಾಡಿನ ಉದ್ದಗಲಕ್ಕೂ ಪರಿಶಿಷ್ಟರು ಇದ್ದಾರೆ. ಮಹೇಶ್ ಸೇರ್ಪಡೆಯಿಂದ ಎಲ್ಲರೂ ಪಕ್ಷಕ್ಕೆ ಬರುತ್ತಾರೆ ಎಂಬ ನಂಬಿಕೆ ಇದೆ ಎಂದರು.