ಬೆಂಗಳೂರು: ಗಡಿ ವಿವಾದ ಕುರಿತಂತೆ ಮಹಾರಾಷ್ಟ್ರದ ನಾಯಕರ ಪ್ರಚೋದನಾಕಾರಿ ನಡೆ ಬಗ್ಗೆ ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಕ್ರೋಶ ಹೊರ ಹಾಕಿದ್ದಾರೆ.
ಬೆಳಗಾವಿ ನಮ್ಮದು, ಇಲ್ಲಿ ಕನ್ನಡ ಧ್ವಜ ಹಾರಿಸುವುದು, ಈ ಮಣ್ಣಿನ ನೆಲದ ಮೌಲ್ಯಗಳಿಗೆ ಬೆಲೆಕೊಡುವ ಪರರನ್ನು ನಮ್ಮಂತೆ ಕಾಣುವುದು ಕನ್ನಡಿಗರ ಪ್ರೀತಿ ಸೌಹಾರ್ದತೆಗೆ ಹಿಡಿದ ಕನ್ನಡಿ. ಇದನ್ನು ಬಲಹೀನತೆ ಎಂದು ಭಾವಿಸಿದರೆ ಕನ್ನಡಿಗರು ತಿರುಗಿ ಬಿದ್ದು ಸರಿಯಾದ ಉತ್ತರ ನೀಡಬೇಕಾಗುತ್ತದೆ ಎಂದವರು ಹೇಳಿದ್ದಾರೆ.
ಈ ಕುರಿತಂತೆ ದರ್ಶನ್ ಮಾಡಿರುವ ಟ್ವೀಟ್ಗೆ ನೆಟ್ಟಿಗರೂ ಬೆಂಬಲ ಸೂಚಿಸಿದ್ದಾರೆ.