ಮಂಗಳೂರು : ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಮಂಗಳೂರಿನ ಕಾರ್ಸ್ಟ್ರೀಟ್ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನೆರವೇರಿತು .

ವಿಶೇಷ ಅಭಿಷೇಕಗಳು, ಅಷ್ಟಾವಧಾನ ಸೇವೆ, ಭರತನಾಟ್ಯ ಸೇವೆಗಳು ನಡೆದವು , ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಮುಂದಾಳುತ್ವದಲ್ಲಿ ಶ್ರೀ ದೇವರ ಮಹಾಮಂಗಳಾರತಿ ನೆರವೇರಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಈ ಅಪೂರ್ವ ಕೈಂಕರ್ಯವನ್ನು ಸಾಕ್ಷೀಕರಿಸಿದರು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ, ಸಾಹುಕಾರ್ ಕಿರಣ್ ಪೈ ಸತೀಶ್ ಪ್ರಭು, ಕೆ ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಚಾತುರ್ಮಾಸ ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ಬಿ ,ಆರ್ . ಭಟ್, ನಾಮದೇವ್ ಮಲ್ಯ, ಗಣಪತಿ ಪೈ, ಸುರೇಶ್ ಕಾಮತ್, ಗುರುದತ್ ಕಾಮತ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.






















































