ಬೆಂಗಳೂರು: ಬಿಗ್ ಬಾಸ್ ಸ್ವರ್ಥಿ, ಕಿರುತೆರೆ ಹಾಗೂ ಸಿನಿಮಾ ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಟಿ ದೀಪಿಕಾ ದಾಸ್ ತಾಯಿ ಪದ್ಮಲತಾ ಬೆಂಗಳೂರು ಉತ್ತರ ತಾಲೂಕು ಚಿಕ್ಕಬಿದರಕಲ್ಲು, ತುಮಕೂರು ರಸ್ತೆಯ ಅಪಾರ್ಟ್ ಮೆಂಟ್ನಲ್ಲಿ ವಾಸವಾಗಿದ್ದಾರೆ, 8 ತಿಂಗಳ ಹಿಂದೆ ಮಗಳು ದೀಪಿಕಾ ದಾಸ್ ದೀಪಕ್ ಕುಮಾರ್ ಜೊತೆ ಮದುವೆಯಾಗಿದ್ದು, ಒಂದು ತಿಂಗಳ ಆಕೆಯ ಅಳಿಯ ಮಗಳು ಇಂಗ್ಲೆಂಡ್ ಪ್ರವಾಸಕ್ಕೆ ಹೋಗಿದ್ದರು. ಕಳೆದ 7 ತಿಂಗಳಿಂದ ವ್ಯಕ್ತಿಯೊಬ್ಬ ಪದ್ಮಲತಾಗೆ ಯಶವಂತ್ ಎಂಬ ವ್ಯಕ್ತಿ ಪೋನ್ ಮಾಡಿ ನಿಮ್ಮ ಅಳಿಯ ದೀಪಕ್ ಕುಮಾರ್ ಜೈಲಿಗೆ ಹೋಗಿ ಬಂದಿದ್ದಾನೆ, ಅಕ್ರಮವಾಗಿ ಲೇಔಟ್ ನಿರ್ಮಾಣ ಮಾಡಿ ಮೋಸ ಮಾಡಿದ್ದಾನೆಂದು ಹೇಳುತ್ತಿದ್ದಾರೆಂತೆ. ಕೆಲವು ದಿನಗಳ ನಂತರ ದೀಪಿಕಾ ದಾಸ್ ಗೂ ಪೋನ್ ನಿಮ್ಮ ಗಂಡನ ಮೋಸ ಮಾಡಿದ್ದಾನೆಂದು ಹೇಳುತ್ತಿದ್ದಾರೆ ಎಂಬುದು ದೀಪಿಕಾದಾಸ್ ಕುಟುಂಬದವರ ಆರೋಪ.
ನೀವು ಹಣ ನೀಡದಿದ್ದಲ್ಲಿ, ಮಾಧ್ಯಮಗಳಿಗೆ ಸುದ್ದಿ ನೀಡಿ ನಿಮ್ಮ ಹೆಸರಿಗೆ ಧಕ್ಕೆ ತರುತ್ತೇನೆ ಎಂದು ಬೆದರಿಕೆ ಹಾಕಿರುವ ಆರೋಪಿ, ಸಾಲಗಾರರ ಕಾಟಕ್ಕೆ ನಿಮ್ಮ ಹೆಸರು ಬರೆದು ಸಾಯುವುದಾಗಿ ಬೆದರಿಕೆ ಕರೆ ಮಾಡುತ್ತಿರುವುದ್ದಾಗಿ ಪದ್ಮಲತಾ ಅವರು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೀರಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.