ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಕಾಂಗ್ರೆಸ್-ಬಿಜೆಪಿ ನಾಯಕರನೇಕರು ಇಂದು ಜೆಡಿಎಸ್ಗೆ ಸೇರ್ಪಡೆಗೊಂಡರು.
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಚಾಮರಾಜನಗರ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಎಂ.ಆರ್ ಅವರ ನೇತೃತ್ವದಲ್ಲಿ ಚಾಮರಾಜನಗರ, ಹನೂರು ಮತ್ತು ಕೊಳ್ಳೇಗಾಲ ಭಾಗದ ಕಾಂಗ್ರೆಸ್, ಬಿಜೆಪಿ ಮತ್ತು ಬಿ.ಎಸ್.ಪಿ ಪಕ್ಷದ ಹಲವಾರು ಪ್ರಮುಖ ಮುಖಂಡರು ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು.