ಚೆನ್ನೈ: ಬೆಂಗಳೂರಿನ ಉದ್ಯಮಿ, ಕರ್ನಾಟಕ ಕರಾವಳಿ ಮೂಲದ ಸಾಮಾಜಿಕ ಕಾರ್ಯಕರ್ತ ಗೋವಿಂದ ಬಾಬು ಪೂಜಾರಿ ಅವರಿಗೆ ತಮಿಳುನಾಡಿನ ಪ್ರತಿಷ್ಠಿತ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದೆ.
ಗೋವಿಂದ ಬಾಬು ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ, ಏಶಿಯಾ ವೇದಿಕ್ ಕಲ್ಚರ್ ಫೌಂಡೇಷನ್ ಮುನ್ಬಡೆಸುವ ವಿಶ್ವವಿದ್ಯಾಲಯವು ಈ ಗೌರವ ಡಾಕ್ಟರೇಟ್ ನೀಡಿದೆ. ಇಂದು ನಡೆದ ಕಾರ್ಯಕ್ರಮದಲ್ಲಿ ಈ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಯಾರು ಈ ಗೋವಿಂದ ಬಾಬು ಪೂಜಾರಿ..?
ಬೆಂಗಳೂರು ಮೂಲದ ಖ್ಯಾತ ಆಹಾರೋದ್ದಿಮೆ ಸಂಸ್ಥೆ ChefTalk ಕಂಪೆನಿಯ ಸಂಸ್ಥಾಪಕರಾಗಿರುವ, ಕರಾವಳಿ ಮೂಲದ ಗೋವಿಂದ ಬಾಬು ಪೂಜಾರಿಯವರು, ಮಹಾರಾಷ್ಟ್ರ, ಆಂಧ್ರ, ದೆಹಲಿ, ಗುಜರಾತ್, ಕರ್ನಾಟಕ ಸಹಿತ ವಿವಿಧ ರಾಜ್ಯಗಳಲ್ಲಿ ತಮ್ಮ ಕಂಪೆನಿಯನ್ನು ವಿಸ್ತರಿಸಿ ಸುಮಾರು 6000 ಮಂದಿಗೆ ಉದ್ಯೋಗ ಕಲ್ಪಿಸಿದ್ದಾರೆ.
ಇದೀಗ ಮೀನುಗಾರ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಮತ್ಸ್ಯಬಂಧ ಯೋಜನೆ ರೂಪಿಸಿ, ಆ ಮೂಲಕ ಮೀನಿನ ಚಿಪ್ಸ್, ಖಾದ್ಯಗಳನ್ನು ತಯಾರಿಸುವ ಕಾರ್ಖಾನೆ ಆರಂಭಿಸಿದ್ದಾರೆ. ಕರಾವಳಿಯ ಯುವಜನರಿಗೆ ಉದ್ಯೋಗ ಕಲ್ಪಿಸಲು ರೆಸಾರ್ಟ್ ಸಹಿತ ಪ್ರವಾಸೋದ್ಯಮ ಯೋಜನೆಗೂ ಮುನ್ನುಡಿ ಬರೆದಿದ್ದಾರೆ.