ಚಿತ್ರದುರ್ಗ: ಹಿರಿಯೂರು ಬಳಿ ಇಂದು ಬೆಳ್ಳಂಬೆಳಿಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತ ನಾಲ್ವರನ್ನು ಬಲಿತೆಗೆದುಕೊಂಡಿದೆ. ಟಯರ್ ಬ್ಲಾಸ್ಟ್ ಆಗಿ ಲಾರಿ ಪಲ್ಟಿಯಾಗಿದ್ದು ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಈ ಅಪಘಾತದಲ್ಲಿ 10 ಜನರಿಗೆ ಗಾಯಗೊಂಡಿದ್ದಾರೆ.
ಈರುಳ್ಳಿ ತುಂಬಿದ್ದ ಲಾರಿ ಪಲ್ಟಿಯಾಗಿದೆ. ಆ ಲಾರಿಗೆ 1 ಕಾರು 6 ಲಾರಿಗಳು ಡಿಕ್ಕಿಯಾಗಿವೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ರಾಷ್ಟ್ರೀಯ ಹೆದ್ದಾರಿ 47ರ ಆಲೂರು ಕ್ರಾಸ್ ಬಳಿ ಈ ಸರಣಿ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು ಹುಯಿಲಗೋಳ ಮೂಲದ ರಮೇಶ್ (30), ಪ್ರತಾಪ್ ಹಟ್ಟಿ (29), ಹನುಮಪ್ಪ ಕಳಕಪ್ಪ (30), ಗುರಪ್ಪ ಹೂಗಾರ್ (29) ಎಂದು ಗುರುತಿಸಲಾಗಿದೆ.
ಬೆಂಗಳೂರುಗೆ ಈರುಳ್ಳಿ ಮಾರಟಕ್ಕೆ ಹೊರಟಿದ್ದ ರೈತರು ಮಾರ್ಗ ಮಧ್ಯೆ ದಾರುಣವಾಗಿ ಮೃತರಾಗಿದ್ದಾರೆ. ಬೇರೆ ಬೇರೆ ಲಾರಿ, ಕಾರಿನಲ್ಲಿದ್ದ ಹತ್ತು ಜನರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಾಧಿಕಾ ಹಾಗೂ ಹಿರಿಯ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
























































