ದೆಹಲಿ: ಅಂತಾರಾಷ್ಟ್ರೀಯ ಭೂಗತ ಪಾತಕಿ ಚೋಟಾ ರಾಜನ್ ಸಾವನ್ನಪ್ಪಿದ್ದಾನೆಂಬ ಸುದ್ದಿ ಕೇಳಿಬಂದಿದೆ.. ದೆಹಲಿಯ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಛೋಟಾ ರಾಜನ್ ಕೋವಿಡ್-19 ಸೋಂಕಿಗೊಳಗಾಗಿ ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂಬ ಸುದ್ದಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಸುದ್ದಿಗಳು ಹರಿದಾಡುತ್ತಿದೆ. ಆದರೆ ಛೋಟಾ ರಜನ್ ಚಿಕಿತ್ಸೆಗೆಂದು ದಾಖಲಿಸಲಾಗಿರುವ ದೆಹಲಿಯ ಏಮ್ಸ್ ಆಸ್ಪತ್ರೆ ವೈದ್ಯರು ಈ ಕುರಿತಂತೆ ಸ್ಪಷ್ಟ ಮಾಹಿತಿ ಬಹಿರಂಗ ಪಡಿಸುತ್ತಿಲ್ಲ ಎನ್ನಲಾಗುತ್ತಿದೆ. ಸದ್ಯ ಈತ ಬದುಕಿದ್ದಾನೆ. ತೀವ್ರನಿಗಾ ಘಟಕದಲ್ಲಿರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ದಾವೂದ್ ಇಬ್ರಾಹಿಂ ನಂಟು ಹೊಂದಿದ್ದ ಈತ ಹಲವಾರು ಕೃತ್ಯಗಳ ಸಂಚುಗಾರನಾಗಿದ್ದ. ಅನಂತರದ ದಿನಗಳಲ್ಲಿ ದಾವೂದ್ ಸಾಂಗತ್ಯ ಕಳಚಿಕೊಂಡ ಛೋಟಾ ರಾಜನ್ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಪಾತಕ ಲೋಕವನ್ನು ಆಳತೊಡಗಿದ. ನಂತರದ ದಿನಗಳಲ್ಲಿ ದಾವೂದ್ ಮತ್ತು ಈತನ ನಡುವೆ ಶೀಥಲ ಸಮರ ನಡೆಯುತ್ತಿತ್ತೆನ್ನಲಾಗಿದೆ.
ಈ ನಡುವೆ, ದೇಶದ ವಿವಿಧ ರಾಜ್ಯಗಳಲ್ಲಿ 70ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿದ್ದ ಛೋಟಾ ರಾಜನ್ ವಿದೇಶದಲ್ಲಿ ಅವಿತುಕೊಂಡು ಅಪರಾದ ಕೃತ್ಯಗಳನ್ನು ನಡೆಸುತ್ತಿದ್ದ. ಭಯೋತ್ಪಾದನಾ ನಿಗ್ರಹ ಕಾಯ್ದೆ, ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಸಹಿತ ಹಲವು ಕಾಯ್ದೆಗಳಡಿ ಈತನ ವಿರುದ್ದ ಪ್ರಕರಣಗಳು ದಾಖಲಾಗಿದ್ದವು.
2015ರಲ್ಲಿ ಇಂಡೋನೇಷ್ಯಾದಲ್ಲಿ ಈತನನ್ನು ಬಂಧಿಸಿ ಭಾರತಕ್ಕೆ ಕರೆತರಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಸೆರೆವಾಸದಲ್ಲಿದ್ದ ಛೋಟಾ ರಾಜನ್ ಕೋವಿಡ್ ಸೋಂಕಿಗೊಳಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ. ಅದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.