ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಸಿಎಂ ಸಿದ್ದರಾಮಯ್ಯ ಅಭಿನಂಧಿಸಿದ್ದಾರೆ.
ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಬದುಕು ದೊಡ್ಡದು, ಮತ್ತೆ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕದ ಜೊತೆಗೆ ಪಾಸಾಗುವ ಅವಕಾಶ ಖಂಡಿತಾ ಸಿಗಲಿದೆ ಎಂದೂ ಕಿವಿಮಾತು ಹೇಳಿದ್ದಾರೆ. ಹತಾಶೆಯ ಕೈಗೆ ಬುದ್ದಿ ಕೊಡದೆ ಸಂಯಮದಿಂದ ವರ್ತಿಸಿ ಎಂದವರು ಸಲಹೆ ಮಾಡಿದ್ದಾರೆ.
ವಿವಿಧ ವಿಭಾಗಗಳಲ್ಲಿ Rank ಪಡೆದಿರುವ ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ.ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣುಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ ಎಂದು ಸಿಎಂ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಹಾರೈಸುತ್ತೇನೆ.
ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಬದುಕು…
— Siddaramaiah (@siddaramaiah) April 8, 2025