ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದ್ದು ಪರಿಸ್ಥಿತಿ ಕೈಮೀರುತ್ತಿದೆ. ಈ ಹಿನ್ನೆಲೆಯಲ್ಲಿ ಮಾರ್ಗೋಪಾಯ ಕಂಡುಕೊಳ್ಳುವ ಸಂಬಂಧ ಸಿಎಂ ಯಡಿಯೂರಪ್ಪ ಅವರು ಇಂದು ಬೆಳಿಗ್ಗೆ ನಡೆಸಿದ ಉನ್ನತ ಮಟ್ಟದ ಸಭೆ ಕುತೂಹಲದ ಕೇಂದ್ರಬಿಂದುವಾಯಿತು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸ ‘ಕಾವೇರಿ’ಯಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕೋವಿಡ್ 19 ವೈರಾಣು ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು ಇದನ್ನು ನಿಯಂತ್ರಿಸುವ ಸಂಬಂಧ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಶಿಫಾರಸ್ಸು ಜಾರಿ ಸಂಬಂಧ ಸಿಎಂ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬಹುತೇಕ ಅಧಿಕಾರಿಗಳು ಬೆಂಗಳೂರಿನಲ್ಲಿ ಕಠಿಣ ಬಿಯಮ ಜಾರಿಯ ಹೊರತಾಗಿ ಸೋಂಕು ನಿಯಂತ್ರಣ ಕಷ್ಟ ಸಾಧ್ಯ ಎಂದು ಸಲಹೆ ನೀಡಿದರೆನ್ನಲಾಗಿದೆ.