ಕಲಬುರಗಿಯ ಜನರ ಜೀವ ಉಳಿಸಲು ಸಚಿವ ಮುರುಗೇಶ್ ನಿರಾಣಿ ಅವಿರತ ಶ್ರಮ.. ಸೋಂಕಿತರ ಚಿಕಿತ್ಸೆ ಸೌಲಭ್ಯಕ್ಕಾಗಿ ಆವಿಷ್ಕಾರ.. ಕೋವಿಡ್ ಕೇರ್ಗಾಗಿ ನಿರ್ಜೀವ ಸ್ಥಿತಿಯಲ್ಲಿರುವ ಅಸ್ಪತ್ರೆಗೆ ಜೀವದಾನ.. ಶಹಬ್ಬಾಸ್ ನಿರಾಣಿ..
ಬೆಂಗಳೂರು -ಕೋವಿಡ್ ಸೋಂಕಿತರಿಗೆ
ಸಕಾಲದಲ್ಲಿ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆ ಶಹಬಾದ್ ನಲ್ಲಿ ಶೀತಲಾವಸ್ಥೆಯಲ್ಲಿರುವ ಇಎಸ್ ಐ ಆಸ್ಪತ್ರೆಗೆ ಆತ್ಯುಧುಮಿಕ ಸೌಲಭ್ಯ ಕಲ್ಪಿಸಿ ‘ಕೋವಿಡ್ ಕೇರ್ ಸೆಂಟರ್’ ಆಗಿ ಪರಿವರ್ತಿಸಲು ತೀರ್ಮಾನಿಸಲಾಗಿದೆ.
ಈ ಸಂಬಂಧ ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ ನಿರಾಣಿ ಅಧಿಕಾರಿಗಳ ಜೊತೆ ಚರ್ಚೆಸಿ ಕೂಡಲೇ ಶಹಬಾದ್ ಪಟ್ಟಣವು ವಾಡಿ ರಸ್ತೆಯಲ್ಲಿರುವ ಇಎಸ್ ಐ ಆಸ್ಪತ್ರೆಯನ್ನು ಕೋವಿಡ್ ಕೇರ್ ಕೇಂದ್ರವಾಗಿ ಪರಿವರ್ತಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿ ವಿ.ವಿ ಜೋಶ್ನಾ,ಶಹಬಾದ್
ತಹಸೀಲ್ದಾರ್ ಸುರೇಶ್ ವರ್ಮ,ಪುರಸಭೆ ಆಯುಕ್ತ ಕೆ.ಗುರುಲಿಂಗಪ್ಪ,ಕಂದಾಯ, ಮತ್ತು ಆರೋಗ್ಯ ಇಲಾಖೆ ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ಚರ್ಚೆಸಿ ಅತೀ ಶೀಘ್ರದಲ್ಲಿ ಕಾರ್ಯಾರಂಭ ಮಾಡುವಂತೆ ಪೂರ್ವ ಸಿದ್ಧತೆಗಳನ್ನು ಕೂಗೊಳಬೇಕೆಂದು ಸಚಿವರು ಸೂಚಿಸಿದ್ದಾರೆ. .
ಸಚಿವರು ಸೂಚನೆ ಕೊಟ್ಡ ಬೆನ್ನಲ್ಲೇ ಇಂದು ಅಧಿಕಾರಿಗಳು ಸ್ಥಳ ಪರಿಶೀಲಿನೆ ಮಾಡಿದ್ದಾರೆ.
ಭಾನುವಾರ ಖುದ್ದು ಸಚಿವ ನಿರಾಣಿ ಅವರೇ ಶಹಬಾದ್ ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಆಸ್ಪತ್ರೆಯಲ್ಲಿ ಬೆಳೆದು ನಿಂತಿರುವ ಗಿಡ-ಗಂಟೆಗಳು, ಬಿರುಕು ಬಿಟ್ಟಿರುವ ಗೋಡೆಗಳು, ಕೈಕೊಟ್ಟಿರುವ ವಿದ್ಯುತ್ ಸಂಪರ್ಕ, ಹಾಳಾಗಿರುವ ಬೆಡ್ಗಳು, ಚಿಕಿತ್ಸಾ ಕೊಠಡಿ, ರೋಗಿಗಳು ತಂಗುವ ಕೊಠಡಿಗಳು, ಶೌಚಾಲಯ, ಅಡುಗೆ ಮನೆ, ಸ್ನಾನದ ಕೋಣೆ ಸೇರಿದಂತೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಬೇಕೆಂದು ಜಿಲ್ಲಾಡಳಿತಕ್ಕೆ ಸಚಿವರು ನಿರ್ದೇಶನ ನೀಡಿದ್ದಾರೆ.
ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಈ ಆಸ್ಪತ್ರೆಯಲ್ಲಿ ಕಲ್ಪಿಸಬೇಕು. ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಪೂರೈಕೆ, ಕುಡಿಯುವ ನೀರು, ಅಡುಗೆ ಮನೆ, ಶೌಚಾಲಯ ಸೇರಿದಂತೆ ಆಧುನಿಕ ಆಸ್ಪತ್ರೆಗೆ ಇರಬೇಕಾದ ಎಲ್ಲ ಮೂಲ ಸೌಕರ್ಯಗಳನ್ನೂ ಕಲ್ಪಿಸಬೇಕು. ಇದು ಸಮರೋಪಾದಿಯಲ್ಲಿ ನಡೆಯಬೇಕೆಂದು ಸಚಿವ ನಿರಾಣಿ ಸೂಚಿಸಿದ್ದಾರೆ.
ಎಷ್ಟು ಸಾಧ್ಯವೋ ಅಷ್ಟು ಬೇಗ ಕೋವಿಡ್ ಸೆಂಟರ್ ಕಾರ್ಯಾರಂಭ ಮಾಡಬೇಕು. ಅಧಿಕಾರಿಗಳು ಇಲ್ಲದ ಸಬೂಬು ಹೇಳುವುದು, ಕಾರಣ ಕೊಟ್ಟು ವಿಳಂಬ ಮಾಡಬೇಡಿ ಎಂದು ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ.
ಅಸ್ಪತ್ರೆಯ ಹಿನ್ನೆಲೆ
1994ರಲ್ಲಿ ಶಹಬಾದ್ ಪಟ್ಟಣದಲ್ಲಿ ಕಾರ್ಮಿಕರಿಗಾಗಿಯೇ ಇಎಸ್ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿತ್ತು. ಪ್ರಾರಂಭದಲ್ಲಿ ಈ ಆಸ್ಪತ್ರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಜಿಲ್ಲೆಯ ನಾನಾ ಭಾಗಗಳಿಂದ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು, ಜನಸಾಮಾನ್ಯರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದರು.
ನುರಿತ ವೈದ್ಯರು ಉತ್ತಮ ಚಿಕಿತ್ಸೆ ಕೊಡುತ್ತಿದ್ದರಿಂದ ಇದೊಂದು ಉತ್ತಮ ಇಎಸ್ಐ ಆಸ್ಪತ್ರೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆಸ್ಪತ್ರೆ ಸುತ್ತಮುತ್ತ ಸಿಮೆಂಟ್ ಫ್ಯಾಕ್ಟರಿಗಳು ಇದ್ದವು. ಕಾಲಕ್ರಮೇಣ ಈ ಕಾರ್ಖಾನೆಗಳು ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಸ್ಥಳಾಂತರಗೊಂಡರೆ, ಇನ್ನೂ ಕೆಲವು ಕಾರ್ಖಾನೆಗಳು ಬೇರೆ ಬೇರೆ ಕಾರಣಗಳಿಂದ ಸ್ಥಗಿತಗೊಂಡವು.
ಹೀಗೆ ಕಾರ್ಖಾನೆ ಸ್ಥಗಿತಗೊಂಡಿದ್ದರಿಂದ ಈ ಆಸ್ಪತ್ರೆಗೆ ದಿನದಿಂದ ದಿನಕ್ಕೆ ಕಾರ್ಮಿಕರು ಬರುವ ಸಂಖ್ಯೆ ಕಡಿಮೆಯಾಗುತ್ತ ಕೊನೆಗೊಂದು ದಿನ ಮುಚ್ಚುವ ಹಂತಕ್ಕೆ ಬಂದಿತು. ಈಗ ಪಾಳು ಬಿದ್ದಿರುವ ಆಸ್ಪತ್ರೆಗೆ ಆಧುನಿಕ ಸ್ಪರ್ಶ ನೀಡಿ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ ಮಾಡಲು ಸಚಿವ ನಿರಾಣಿ ಮುಂದಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.