ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣದಲ್ಲಿ ಬಿಜೆಪಿ ನಾಯಕ, ಯಡಿಯೂರಪ್ಪ ಆಪ್ತ ಡಿ.ಎಸ್. ವೀರಯ್ಯ ಅವರ ಬಂಧನವಾಗಿದೆ.
ವಾಲ್ಮಿಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಬಂಧನಕ್ಕೆ ಬಿಜೆಪಿ ಪಟ್ಟುಹಿಡಿದಿದ್ದರೆ, ಇನ್ನೊಂದೆಡೆ ಬಂಧನವಾಗಿರುವುದು ಬಿಜೆಪಿ ನಾಯಕ..!
ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಹಗರಣದಲ್ಲಿ ನಿಗಮದ ಮಾಜಿ ಅಧ್ಯಕ್ಷರೂ ಆದ ಮಾಜಿ ಶಾಸಕ ಡಿ.ಎಸ್.ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣದಲ್ಲಿ 2021ರಿಂದ 2023ರ ಅವಧಿಯಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ್ ಅವರು ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು ಶುಕ್ರವಾರ ವೀರಯ್ಯ ಅವರನ್ಜು ಬಂಧಿಸಿದ್ದಾರೆ.
2021ರಿಂದ 2023ರ ನಡುವೆ ಡಿ.ಎಸ್.ವೀರಯ್ಯ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷರಾಗಿದ್ದಾಗ 47.10 ಕೋಟಿ ರೂಪಾಯಿ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಆ ಅವಧಿಯಲ್ಲಿ ತುಂಡು ಡಿ.ಎಸ್. ವೀರಯ್ಯ ಅವರು ನಿಗಮದ ಅಧ್ಯಕ್ಷರಾಗಿದ್ದು, ಗುತ್ತಿಗೆ ಅಕ್ರಮ ಆರೋಪ ಬಗ್ಗೆ 2023 ಸೆಪ್ಟೆಂಬರ್ 23ರಂದು ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಡಿ.ಎಸ್. ವೀರಯ್ಯ ಅವರನ್ನು ಬಂಧಿಸಿದೆ.