ನವದೆಹಲಿ: ದಿಲ್ಲಿಯ ಶಹಬಾದ್ ಗ್ರಾಮದ ಕೊಳೆಗೇರಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 100ಕ್ಕೂ ಹೆಚ್ಚು ಗುಡಿಸಲುಗಳು ನಾಶವಾಗಿವೆ. ಅಗ್ನಿಶಾಮಕ ಸೇವೆಯ (ಡಿಎಫ್ಎಸ್) ನಿರ್ದೇಶಕ ಅತುಲ್ ಗರ್ಗ್ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದು ಭಾನುವಾರ ರಾತ್ರಿ 10:17 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ.
ಅತಳಕ್ಕೆ ಧಾವಿಸಿದ್ದ 15 ಅಗ್ನಿಶಾಮಕ ತಂಡಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಸುಮಾರು 130 ಗುಡಿಸಲುಗಳು ಬೂದಿಯಾಗಿವೆ ಎನ್ನಲಾಗುತ್ತಿದೆ.