ಮಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಈ ಸಂಬಂಧ ನಿರ್ಮಿಸಲಾಗಿರುವ ನೂತನ ಸಂಕೀರ್ಣವನ್ನು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮಂಗಳವಾರ ಉದ್ಘಾಟಿಸಿದರು.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗಿದ್ದು. ನೂತನ ಸಂಕೀರ್ಣವನ್ನು ಜನವರಿ 7ರಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಉದ್ಘಾಟಿಸಲಿದ್ದಾರೆ.
2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ… pic.twitter.com/pjq23dodQe
2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 16 ವಿಶಾಲ ಸಭಾಭವನಗಳಲ್ಲಿ ಭಕ್ತರು ವಿಶ್ರಾಂತಿ ಪಡೆಯಬಹುದಾಗಿದೆ. ಸರದಿಯಲ್ಲಿ ಜನರು ಸರದಿಯಲ್ಲಿ ನಿಂತು ಕಾಯಬೇಕಿಲ್ಲ. ವಿಶಾಲವಾದ ಭವನದಲ್ಲಿ ಕುರ್ಚಿಗಳ ಮೇಲೆ ಕುಳಿತು ಕ್ರಮೇಣವಾಗಿ ಮುಂದಿನ ಭವನಗಳಿಗೆ ಸ್ಥಳಾಂತರಗೊಳ್ಳಬಹುದು.