ದೊಡ್ಡಬಳ್ಳಾಪುರ: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ನಾಯಕನಾಗಿ ನಟಿಸಿರುವ ಸೈರನ್ ಸಿನಿಮಾ ಮೇ.26ರಂದು ಬಿಡುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ಯಶಸ್ವಿಯಾಗಲೆಂದು ದೊಡ್ಡಬಳ್ಳಾಪುರದ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮುಖಂಡ ರಾಜಘಟ್ಟ ರವಿ ಕನ್ನಡ ಎಂದು ಬಂದಾಗ ಹೋರಾಟ ನೆನಪಾಗುತ್ತದೆ. ನಾವು ಹಲವಾರು ವರ್ಷಗಳಿಂದ ಪ್ರವೀಣ್ ಕುಮಾರ್ ಶೆಟ್ಟಿ ಅವರನ್ನು ನೋಡುತ್ತಾ ಬಂದಿದ್ದೇವೆ. ಅವರ ಮನೆಯಿಂದ ಚಿತ್ರರಂಗಕ್ಕೆ ಒಂದು ಉಡುಗೊರೆಯಾಗಿ ಮಗನನ್ನು ಕೊಡುತ್ತಿದ್ದಾರೆ. ಹೊಸದಾಗಿ ಬರುವವರು ಗುರಿ ಇಟ್ಟುಕೊಂಡು ಬರಬೇಕು. ಕನ್ನಡ ಸಿನಿಮಾಗಳಿಗೆ ಸಿನಿ ಪ್ರೇಕ್ಷಕರ ಪ್ರೋತ್ಸಾಹ ಅತ್ಯಗತ್ಯ ಎಂದರು.
ದೊಡ್ಡಬಳ್ಳಾಪುರದ ನೆಲದಾಂಜನೇಯಸ್ವಾಮಿ ದೇಗುಲದಲ್ಲಿ ಕರವೇ ಮುಖಂಡರು ಸೈರನ್ ಸಿನಿಮಾ ಯಶಸ್ಸಿಗೆ ಪೂಜೆ ಸಲ್ಲಿಸಿದರು. ಮುಖಂಡರಾದ ರವಿ ಮಾವಿನಕುಂಟೆ, ಸಂಜಿವ್ ನಾಯಕ್, ರೈಲ್ವೆ ಸ್ಟೇಷನ್ ಮಲ್ಲೇಶ್, ಡಿ.ಪಿ.ಆಂಜನೇಯ, ವೆಂಕಟೇಶ್, ಲೋಕೇಶ್, ಎಸ್.ಎಲ್.ಎನ್ ವೇಣು, ಜೋಗಳ್ಳಿ ಅಮ್ಮು, ಆರ್.ಜಿ.ಆನಂದಮೂರ್ತಿ ಮತ್ತಿತರರಿದ್ದರು.