ನವದೆಹಲಿ: ದೇಶಾದ್ಯಂತ ಮುಸಲ್ಮಾನರ ಪವಿತ್ರ ಹಬ್ಬ ಈದ್ ಉಲ್ ಫಿತರ್(ರಂಜಾನ್) ಆಚರಿಸಲಾಗುತ್ತಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಭಾನಿವಾರ ಈದ್-ಉಲ್-ಫಿತರ್ ಚಂದ್ರ ಗೋಚರಿಸಿದ ನಂತರ ರಮ್ಜಾನ್ ಉಪವಾಸವನ್ನು ಅಂತ್ಯಗೊಳಿಸಿರುವ ಮುಸ್ಲಿಮರು ಹಬ್ಬ ಸಂಭ್ರಮದಲ್ಲಿ ನಿರತರಾಗಿದ್ದಾರೆ. ಎಲ್ಲೆಲ್ಲೂ ಶುಭಾಶಯಗಳ ವಿನಿಮಯ ಸಾಗಿದೆ.