ಚಿಕ್ಕೋಡಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾರು ಅಪಘಾತಕ್ಕೀಡಾಗಿದೆ. ಬೆಳಗಾವಿ ಹೊರವಲಯದ ಜತ್ ಜಾಂಬೋಟಿ ಅಂತರರಾಜ್ಯ ರಾಜ್ಯ ಹೆದ್ದಾರಿಯ ಹಾರೂಗೇರಿ ಪಟ್ಟಣದ ಬಳಿ ಈ ಅಪಘಾತ ಸಂಭವಿಸಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Ex-Dcm Laxman Savadi car accident near Belagavi, Karnataka @BJP4Karnataka @friendsofrss @blsanthosh pic.twitter.com/lNlW6tw35a
— jayaa (@unsocial2023) August 31, 2022
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಈ ಅಪಘಾತ ಸಂಭವಿಸಿದೆ. ಅಥಣಿಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಸವದಿ ಅವರ ಕಾರಿಗೆ ಮಾರ್ಗ ಮಧ್ಯೆ ಬೈಕ್ ಅಡ್ಡ ಬಂದಿದೆ. ಬೈಕನ್ನು ತಪ್ಪಿಸಲು ಹೋಗಿ ಕಾರು, ತಿರುವಿನ ಅಂಚಿನಲ್ಲಿ ರಸ್ತೆ ಪಕ್ಕದ ನಾಲೆಗೆ ಉರುಳಿಬಿದ್ದಿದೆ ಎನ್ನಲಾಗಿದೆ.
ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಲಕ್ಷ್ಮಣ್ ಸವದಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳದಲ್ಲಿದ್ದ ಸ್ಥಳೀಯರು ಸ್ಥಳಕ್ಜೆ ಧಾವಿಸಿ ಲಕ್ಷ್ಮಣ್ ಸವದಿ ಸಹಿತ ಕಾರಿನಲ್ಲಿದ್ದವರನ್ನು ಪಾರು ಮಾಡಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಸವದಿ ಅವರನ್ನು ಆಸ್ಪತ್ರಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಅಪಘಾತ ಸ್ಥಳಕ್ಕೆ ಹಾರೂಗೇರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.