ಬೆಂಗಳೂರು: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ ಬೆಂಗಳೂರಿನ ಮಾಜಿ ಮೇಯರ್ ಸಂಪತ್ ರಾಜ್ರನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ, ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಾಗೂ 2 ಪೊಲೀಸ್ ಠಾಣೆಗಳ ಮೇಲೆ ನಡೆದ ದಾಳಿ ಪ್ರಕರಣಗಳಲ್ಲಿ ಹಲವರು ಬಙಧನಕ್ಕೊಳಗಾಗಿದ್ದರು. ಈ ಪ್ರಕರಣದಲ್ಲಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡದ ಬಗ್ಗೆಯೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು.
ಅವರನ್ನು ವಿಚಾರಣೆಗೆ ಗುತಿಪಡಿಸಲು ಸಿಸಿಬಿ ಪೊಲೀಸರು ಪ್ರಯತ್ನ ನಡೆಸಿದ್ದರಾದರೂ ಸರಣಿ ನೆಪಗಳನ್ನು ಒಡ್ಡಿ ಸಂಪತ್ ರಾಜ್ ಕಣ್ಣಾಮುಚ್ಚಾಳೆಯಾಡುತ್ತಿದ್ದರು.
ಹಲವು ದಿನಗಳ ಬೇಟೆ ನಂತರ ಸಂಪತ್ ರಾಜ್ ಆಪ್ತ ನೀಡಿದ ಸುಳಿವು ಆಧರಿಸಿ ಬೆಂಗಳೂರು ಸಿಸಿಬಿ ಪೊಲೀಸರು ಸಂಪತ್ ರಾಜ್ ಅವರನ್ನು ಸೋಮವಾರ ಬಂಧಿಸಿದ್ದಾರೆ. ಸ್ನೇಹಿತನ ಮನೆಗೆ ಅವರು ಭೇಟಿ ನೀಡುವ ಬಗ್ಗೆ ಸುಳಿವು ಪಡೆದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.