ಬೆಂಗಳೂರು: ಉದ್ಯಾನ ನಗರಿಯ ದೇವರಚಿಕ್ಕನಹಳ್ಳಿಯಲ್ಲಿನ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅನಾಹುತ ಇಬ್ಬರನ್ನು ಆಹುತಿ ತೆಗೆದುಕೊಂಡ ನಂತರ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಯಾವುದೇ ಅಪಾರ್ಟ್ಮೆಂಟ್ನಲ್ಲಿ ಬಾಲ್ಕನಿ ಮುಚ್ಚಬಾರದು ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.
ಬಿಬಿಎಂಪಿ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಹೊರಡಿಸಿರುವ ಆದೇಶ ಗಮನಸೆಳೆದಿದೆ.
ಇದೀಗ ವಸತಿ ಸಮುಚ್ಚಯಗಳಲ್ಲಿ ಅಥವಾ ಇತರೆ ಕಟ್ಟಡಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಸೂಚಿಸಿರುವ ಬಿಬಿಎಂಪಿ, ಒಂದು ವೇಳೆ ವಸತಿ ಸಮುಚ್ಚಯಗಳಲ್ಲಿ, ಇತರೆ ಕಟ್ಟಡಗಳಲ್ಲಿ ಮಾರ್ಪಾಡು ಅವಶ್ಯವಿದ್ದಲ್ಲಿ ಪಾಲಿಕೆಯ ಸಕ್ಷಮ ಪ್ರಾಧಿಕಾರಗಳಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕಿದೆ.