ಬೆಂಗಳೂರು: ಸುಪ್ರಸಿದ್ಧ ಅಂತರಿಕ್ಷ ವಿಜ್ಞಾನಿ ಡಾ. ಕಸ್ತೂರಿರಂಗನ್ ಅವರ ದೇಹಾವಸಾನದಿಂದ ಭಾರತದ ರಾಷ್ಟ್ರಜೀವನದಲ್ಲಿ ಒಂದು ದೇದೀಪ್ಯಮಾನ ನಕ್ಷತ್ರದ ಅಸ್ತಂಗತವಾಗಿದೆ. ಡಾ. ರಂಗನ್ ಅವರು ಈಗ ನೆನಪು ಮಾತ್ರ.
ಪದ್ಮವಿಭೂಷಣ ಸಮ್ಮಾನಿತ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದರ ಮಾಜಿ ಅಧ್ಯಕ್ಷರಾದ ಡಾ.ರಂಗನ್ ಅವರು ವೈಜ್ಞಾನಿಕ ಕ್ಷೇತ್ರದಲ್ಲಿ ವೈಶ್ವಿಕ ಸ್ತರದ ದಿಗ್ಗಜರಾಗಿದ್ದರು.ಅದರ ಜೊತೆಗೆ ರಾಜ್ಯಸಭಾ, ಯೋಜನಾ ಆಯೋಗದಂತಹ ವಿವಿಧ ಕ್ಷೇತ್ರಗಳಲ್ಲಿ ಅವರು ರಾಷ್ಟ್ರದ ಸೇವೆಗೈದಿದ್ದಾರೆ. ಅವರು ಬಾಹ್ಯಕಾಶ ಕ್ಷೇತ್ರಕ್ಕೆ ನೀಡಿದ ಸೇವೆಗೆ ಸಮಾನವಾಗಿ ಭಾರತದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ನಿರ್ಮಿಸುವುದರಲ್ಲಿ ಹಾಗೂ ಅನುಷ್ಠಾನಗೊಳಿಸುವುದರಲ್ಲಿ ಕೊಡುಗೆ ನೀಡಿರುವುದು ಒಂದು ಐತಿಹಾಸಿಕ ಸಾಧನೆಯಾಗಿದೆ. ವಿಜ್ಞಾನಿ, ನೀತಿ ನಿರ್ಮಾತೃ, ಶಿಕ್ಷಣತಜ್ಞ, ಪರಿಸರತಜ್ಞ ಹೀಗೆ ಹಲವು ಭೂಮಿಕೆಗಳಲ್ಲಿ ಪ್ರಭಾವಿಯಾಗಿ ಕಾರ್ಯನಿರ್ವಹಿಸಿದ ಡಾ. ಕಸ್ತೂರಿರಂಗನ್ ಅವರು ಉದಾತ್ತ ಮಾನವತಾವಾದಿ ಮತ್ತು ಸಂವೇದನಾಶೀಲ ವ್ಯಕ್ತಿಯಾಗಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರವಾಗಿ, ಡಾ. ಕಸ್ತೂರಿರಂಗನ್ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳನ್ನು ವ್ಯಕ್ತಪಡಿಸುತ್ತೇವೆ. ಅಂತಹ ಮಹಾನ್ ದೇಶಭಕ್ತನಿಗೆ ಅರೆಸ್ಸೆಸ್ ಶ್ರದ್ಧಾಂಜಲಿಯನ್ನು ಸಲ್ಲಿಸಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ। ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.