ಮಂಗಳೂರು: ಮೇಲ್ಮನೆ ಚುನಾವಣಾ ಅಖಾಡದಲ್ಲಿ ಬಿಜೆಪಿ ವಿರುದ್ದ ಬಂಡಾಯದ ಬಾವುಟ ಹಾರಿಸಿರುವ ಮಾಜಿ ಶಾಸಕ ರಘುಪತಿ ಭಟ್, ಪಕ್ಷದ ವರಿಷ್ಠರ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡದ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಿಜೆಪಿಯಿಂದ ಕರಾವಳಿಗೆ ಅನ್ಯಾಯವಾಗಿದೆ. ಇದು ಭೌಗೋಳಿಕ ಅನ್ಯಾಯ ಹಾಗಾಗಿ ನೈಋತ್ಯ ಪದವೀಧರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಈ ಸ್ಪರ್ಧೆ ಮೂಲಕ ಯಾರನ್ನೂ ಸೋಲಿಸುವ ಉದ್ದೇಶವಿಲ್ಲ, ಬದಲಿಗೆ ಬದಲಾಗಿ ಗೆದ್ದು, ಪದವೀಧರ ಕ್ಷೇತ್ರದ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತೇನೆ’ ಎಂದರು. ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬೇಸರ, ನೋವಿನಿಂದ ಸ್ಪರ್ಧಿಸುತ್ತಿದ್ದೇನೆ’ ಎಂದರು.
ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವಾಗ ಬೂತ್ ಮಟ್ಟದಿಂದಲೇ ಹೆಸರು ಪಡೆಯಲಾಗುತ್ತದೆ. ಆದರೆ, ಈಗ ರಾಜ್ಯದಿಂದ ಹೋದ ಹೆಸರು ಕೇಂದ್ರದಲ್ಲಿ ಬದಲಾಗುತ್ತದೆ ಎಂದು ವಾಗ್ದಾಳಿ ನಡೆಸಿದ ರಘುಪತಿ ಭಟ್, ಈಗ ಕಾಂಗ್ರೆಸ್ನ ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೂ ಬಂದಿದೆ’ ಎಂದು ಲೇವಡಿ ಮಾಡಿದರು.