ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 10ರಿಂದ ಪ್ರತಿಭಟನೆಗೆ ಮುಂದಾಗಿರುವ ಅತಿಥಿ ಉಪನ್ಯಾಸಕರ ಬೆಂಬಲಕ್ಕೆ ಜೆಡಿಎಸ್ ನಿಂತಿದೆ. ಈ ಸಂಬಂಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಸರಣಿ ಟ್ವೀಟ್ ಗಮನಸೆಳೆದಿದೆ.
ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11000 ರಿಂದ 13000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ ಎಂದು ಅವರು ಸರ್ಕಾರದ ಗಮನಸೆಳೆದಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? 2/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 8, 2022
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? ಎಂದವರು ಪ್ರಶ್ನಿಸಿದ್ದಾರೆ.
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ. 3/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 8, 2022
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಹೆಚ್ಡಿಕೆ ಆಗ್ರಹಿಸಿದ್ದಾರೆ.