ಬೆಂಗಳೂರು: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬಿಬಿಎಂಪಿ ಕಮೀಷನರ್ ಮಂಜುನಾಥ್ ಪ್ರಸಾದ್ ಅವರನ್ನು ವರ್ಗಾಯಿಸಿರುವ ಸರ್ಕಾರ, ನೂತನ ಆಯುಕ್ತರಾಗಿ ಗೌರವ್ ಗುಪ್ತಾ ಅವರನ್ನು ನೇಮಕ ಮಾಡಿದೆ. ಗೌರವ್ ಗುಪ್ತಾ ಅವರಿಗೆ ಹೆಚ್ಚುವರಿಯಾಗಿ ಕಂದಾಯ ಇಲಾಖೆ, ವಿಪತ್ತು ನಿರ್ವಹಣಾ ಇಲಾಖೆ ಹೊಣೆ ನೀಡಲಾಗಿದೆ. ಮಂಜುನಾಥ್ ಪ್ರಸಾದ್ ಅವರನ್ನು ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಬಿಬಿಎಂಪಿ ಆಡಳಿತ ಅಧಿಕಾರಿಯಾಗಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಆಡಳಿತ ಸುಧಾರಣೆ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ರಾಜೀವ್ ಶರ್ಮ, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಜಿ. ಕುಮಾರ್ ನಾಯಕ್, ಮೂಲಸೌಕರ್ಯ ಅಭಿವೃದ್ಧಿ ನಿಗಮದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಪಿಲ್ ಮೋಹನ್, ಎಂಎಸ್ಎಂಇ ಕಾರ್ಯದರ್ಶಿಯಾಗಿ ಪಂಕಜ್ ಕುಮಾರ್ ಪಾಂಡೆ, ಡಿಪಿಎಆರ್ ಕಾರ್ಯದರ್ಶಿಯಾಗಿ ವಿ. ಪೊನ್ನುರಾಜ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.