ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಸನ್ನಿವೇಶವು ಆಶಾದಾಯಕ ಬೆಳವಣಿಗೆಗೆ ಸಾಕ್ಷಿಯಾಗಿದೆ.
Karnataka CM Siddaramaiah along with state Home Minister G Parameshwara meets Union Home Minister Amit Shah, in Delhi
(Source: CMO) pic.twitter.com/U6cqzzBlIp
— TIMES NOW (@TimesNow) June 29, 2024
ರಾಜ್ಯದ ಪೊಲೀಸ್ ಇಲಾಖೆಗೆ ನೆರವು, ನಗರಗಳ ಅಭಿವೃದ್ಧಿ ಸಂಬಂಧ ಕೇಂದ್ರ ಸಚಿವರ ಜೊತೆ ಸಿಎಂ ಮಹತ್ವದ ಚರ್ಚೆ ನಡೆಸಿದರು. ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ನಗರಗಳಲ್ಲಿ ಬೆಂಗಳೂರು ಮಾದರಿಯಲ್ಲಿ ಸೇಫ್ ಸಿಟಿ ಯೋಜನೆಯ ನಿರ್ಭಯಾ ನಿಧಿಯಡಿಯಲ್ಲಿ ಅನುಷ್ಠಾನ ಆಗಬೇಕು. 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕೆಂದು ಸಿದ್ದರಾಮಯ್ಯ ಮನವಿ ಮಾಡಿದರು.
ರಾಜ್ಯದಲ್ಲಿ 100 ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡ ನಿರ್ಮಿಸಲು ಸುಮಾರು 300 ಕೋಟಿ ರೂಪಾಯಿ ಅಗತ್ಯವಿದ್ದು, ನೆರವು ಒದಗಿಸುವಂತೆ ಸಿಎಂ ಮಾಡಿದ ಮನವಿಗೆ ಸೂಕ್ತ ಕ್ರಮದ ಭರವಸೆಯನ್ನು ಅಮಿತ್ ಶಾ ನೀಡಿದ್ದಾರೆ ಎನ್ನಲಾಗಿದೆ.