ಅಹ್ಮದಾಬಾದ್: ಈ ಬಾರಿಯ ಐಪಿಎಲ್ ಕ್ರಿಕೆಟ್ನಲ್ಲಿ ಪ್ರಶಸ್ತಿ ಗೆಲ್ಲುವ ಆರ್ಸಿಬಿ ಕನಸು ಭಗ್ನವಾಗಿದೆ. ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲು ಅನುಭವಿಸಿದೆ.
ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಆರ್ಸಿಬಿ ಮೊದಲು ಬ್ಯಾಟಿಂಗ್ಗಿಳಿದು 8 ವಿಕೆಟಿಗೆ 172ರನ್ ಗಳಿಸಿತು. ಈ ಗೆಲುವಿನ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ 19 ಓವರ್ಗಳಲ್ಲಿ 6 ವಿಕೆಟಿಗೆ 174 ರನ್ ಗಳಿಸಿ ಜಯಭೇರಿ ಭಾರಿಸಿತು.
ಈ ನಡುವೆ, ಲೀಗ್ ಹಂತದಲ್ಲಿ ಸತತ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ತಂಡ ಬುಧವಾರದ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದು ಫೈನಲ್ ಪ್ರವೇಶಿಸುವ ಕನಸನ್ನು ಹೊತ್ತಿತ್ತು. ಆದರೆ ಬುಧವಾರದ ಪಂದ್ಯವನ್ನು ಗೆದ್ದ ರಾಜಸ್ಥಾನ್ ರಾಯಲ್ಸ್ ಶುಕ್ರವಾರದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಹೈದರಾಬಾದ್-ರಾಜಸ್ಥಾನ್ ಜೊತೆ ಸೆಣಸಾಟದ ಅಗ್ನಿಪರೀಕ್ಷೆ ಎದುರಿಸಲಿದೆ .