ಬೆಂಗಳೂರು: ಅಂದು ಬಿಜೆಪಿ ಮೇಲೆ ಕಾಂಗ್ರೆಸ್ ನಾಯಕರು 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಕಾಂಗ್ರೆಸ್ ನಾಯಕರ ಆಪ್ತನ ಮನೆಯಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ಹಣ ಸಿಕ್ಕಿದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದ್ದಾರೆ.
ಮೊನ್ನೆಯ ಪಾಲಿಕೆಯಲ್ಲಿ 600 ಕೋಟಿ ರೂ ಬಾಕಿ ಹಣ ಬಿಡುಗಡೆಯಾಗಿತ್ತು. ಇದು ಅದರ ಕಮಿಷನ್ ಹಣದ ಬಾಬ್ತು ಎಂದು ಅನೇಕ ಗುತ್ತಿಗೆದಾರರು ಹೇಳುತ್ತಿದ್ದಾರೆ ನಿಜವೇ ಎಂದು ಸಿ.ಟಿ.ರವಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನೂ ಪ್ರಶ್ನಿಸಿದ್ದಾರೆ.
ಪಂಚ ರಾಜ್ಯಗಳ ಚುನಾವಣಾ ಸಂದರ್ಭದಲ್ಲಿ ಯಾವ ಯಾವ ರಾಜ್ಯದ ಚುನಾವಣೆಗೆ ನಮ್ಮ ಕರ್ನಾಟಕವನ್ನು ATM ಮಾಡಿಕೊಂಡಿದ್ದೀರಿ ಕಾಂಗ್ರೆಸ್ಸಿಗರೇ? ಗ್ಯಾರೆಂಟಿ ಎಂಬ ಸುಳ್ಳು ಆಮಿಷ ಒಡ್ಡಿ ಅಧಿಕಾರಕ್ಕೆ ಬಂದ ನೀವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಲು ಯೋಜನೆ ಹಾಕಿಕೊಂಡಿದ್ದೀರಿ? ಎಂದೂ ಅವರು ಪ್ರಶ್ನಿಸಿದ್ದಾರೆ.