ಕಲಬುರಗಿ ಜಿಲ್ಲೆಗೆ ಬೋಯಿಂಗ್ ಇಂಡಿಯಾ ಸಂಸ್ಥೆಯ 250 ಆಕ್ಸಿಜನ್ ಬೆಡ್ ಆಸ್ಪತ್ರೆ ನಿಮಾ೯ಣ.. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಪ್ರಕಟ.. ಪಿಪಿಪಿ ಮಾದರಿಯಲ್ಲಿ 6 ತಿಂಗಳೊಳಗೆ ಕಾಮಗಾರಿ ಪೂಣ೯..
ಕಲಬುರಗಿ: ಕೋವಿಡ್ ಸೋಂಕಿತರಿಗಾಗಿಯೇ ಬೋಯಿಂಗ್ ವಿಮಾನ ಸಂಸ್ಥೆಯು ಸುಮಾರು 250 ಹಾಸಿಗೆಯ ಸಾಮರ್ಥ್ಯದ
ಅಮ್ಲಜನಕಯುಕ್ತ ಆಸ್ಪತ್ರೆ ನಿರ್ಮಾಣ ಮಾಡಲು ಮುಂದೆ ಬಂದಿದೆ ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಇಂದಿಲ್ಲಿ ಪ್ರಕಟಿಸಿದ್ದಾರೆ.
ಈ ಆಸ್ಪತ್ರೆಯು ಖಾಸಗಿ ಸಾರ್ವಜನಿಕ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ನಿರ್ಮಾಣವಾಗಲಿದ್ದು, ಎಷ್ಟು ಸಾಧ್ಯವೋ ಅಷ್ಟು ತ್ವರಿತಗತಿಯಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಅವರು ಹೇಳಿದರು. ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇದೇ ಸಂಸ್ಥೆಯಿಂದ ಬೆಂಗಳೂರಿನ ಯಲಹಂಕದಲ್ಲಿಯೂ 200 ಆಕ್ಸಿಜನ್ ಬೆಡ್ ಸ್ಥಾಪಿಸಲಾಗುತ್ತಿದೆ ಎಂದರು.
ಪ್ರಮುಖ ಸ್ಥಳದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ನಿವೇಶನವನ್ನು ಇಂದೇ ಗುರುತಿಸಲಾಗುವುದು. ಜಿಲ್ಲಾಡಳಿತ ಹಾಗೂ ಜಿಲ್ಲಾ ಜನಪ್ರತಿನಿಧಿಗಳ ಜೊತೆ ಚರ್ಚೆಸಿ ಸೂಕ್ತ ಸ್ಥಳದಲ್ಲಿ ನಿರ್ಮಾಣ ಮಾಡಲಾಗುವುದೆಂದರು. ನಾಳೆಯಿಂದ ಕೆಲಸ ಆರಂಭವಾಗಲಿದೆ.ಮುಂದಿನ ಆರು ತಿಂಗಳ ಒಳಗೆ ಪೂಣ೯ಗೊಳ್ಳಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಕಲಬುರಗಿಯಲ್ಲಿ ಒಟ್ಟು 1600 ಬೆಡ್ ಇದೆ. ಆಕ್ಸಿಜನ್ 400 ಐಸಿಯು ಬೆಡ್ 378 ವ್ಯವಸ್ಥೆ ಇದೆ.ಇ ಎಸ್ ಐ ಆಸ್ಪತ್ರೆಯಲ್ಲಿ 500 ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇಂದು ಜಿಲ್ಲೆಗೆ 200 ವಯುಲ್ ರೆಮ್ ಡಿಸಿವರ್ ಇಂಜೆಕ್ಷನ್ ಬಂದಿದೆ.ನಾಳೆ ಹೆಚ್ಚಿನ ಇಂಜೆಕ್ಷನ್ ಕಳುಹಿಸುವಂತೆ ಡಿಸಿಎಂ ಅಶ್ವಥ್ ನಾರಾಯಣ್ ಅವರ ಗಮನಕ್ಕೆ ತರಲಾಗಿದೆ.ಜಿಲ್ಲೆಯಲ್ಲಿ
ಆಕ್ಸಿಜನ್ ಕೊರತೆ ಇಲ್ಲ , ಬೇರೆ ಕಡೆಯಿಂದ
ತರುವುದಕ್ಕೆ ನಮಗೆ ತೊಂದರೆ ಆಗುತ್ತಿದೆ ಎಂದು
ವಾಸ್ತವವನ್ನು ತೆರೆದಿಟ್ಟರು. ಸರ್ಕಾರದ ಖೋಟಾ ಹೊರತಾಗಿ ಬೇರೆ ಕಡೆಯಿಂದ ಎರಡು ಟ್ಯಾಂಕ್ ಆಕ್ಸಿಜನ್ ತರಲಾಗುತ್ತಿದೆ. ಭಾನುವಾರ ಬೆಳಿಗ್ಗೆ ಕಲಬುರಗಿ ಜಿಲ್ಲೆಗೆ ಒಂದು ಟ್ಯಾಂಕರ್ ಆಕ್ಸಿಜನ್ ಬರುತ್ತದೆ.ಮುಂದಿನ ವಾರಕ್ಕೆ ನಮಗೆ 30 ಕೆ ಎಲ್ ಆಕ್ಸಿಜನ್ ಬೇಕಾಗಬುದು ಎಂದು ಸಚಿವ ನಿರಾಣಿ ಅವರು ಅಂದಾಜಿಸಿದರು.
ಆ ನಿಟ್ಟಿನಲ್ಲಿ ಗಮನ ವಹಿಸಿ ಆಕ್ಸಿಜನ್ ಪೂರೈಕೆ ಮಾಡಿಕೊಳ್ಳಲಾಗುತ್ತಿದೆ.ಸಿಲಿಂಡರ್ ಖರೀದಿಗ ಹಣ ನೀಡಲಾಗಿದೆ , ಆದರೆ, ಮಹಾರಾಷ್ಟ್ರದವರು ದೂರವಾಣಿ ಕರೆಗಳನ್ನು ಸ್ವೀಕರಿಸುತ್ತಿಲ್ಲ.100 ಆಕ್ಸಿಜನ್ ಕಾನ್ಸಟ್ರೆಟರ್ ಸೋಮವಾರ ಕಲಬುರಗಿಗೆ ಬರಲಿದೆ ಎಂದು ಹೇಳಿದರು.
ಅಕ್ಕ ಪಕ್ಕದ ರಾಜ್ಯದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಬಡವರಿಗೆ ಏನ್ ವ್ಯವಸ್ಥೆ ಕಲ್ಪಿಸಿದ್ದಾರೆ ಅನ್ನೋದನ್ನ ನೋಡಿ ಮುಂದಿನ ದಿನಗಳಲ್ಲಿ ಸರ್ಕಾರ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಎರಡು ದಿನಗಳ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಚಿವ ನಿರಾಣಿ ಅವರು ತಮ್ಮ ಆರೋಗ್ಯದ ಕಡೆಯು ಗಮನ ಕೊಡದೆ ಮಿಂಚಿನ ಸಂಚಾರ ನಡಸಿ ಕೋವಿಡ್ ಸೋಂಕಿತರಲ್ಲಿ’ ಆತ್ಮವಿಶ್ವಾಸ’
ತುಂಬುವ ಪ್ರಯತ್ನ ಮಾಡಿದರು. ಮೊದಲು ಸೇಡಂ ಪಟ್ಟಣದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿ ಹಾಸಿಗೆ ಇಲ್ಲದೆ ಸಂಕಷ್ಟದಲ್ಲಿದ್ದವರಿಗೆ ಧೈರ್ಯ ತುಂಬುವ ಪ್ರಾಮಾಣಿಕ ಪ್ರಯತ್ನ ಮಾಡಿದರು.
ಬಳಿಕ ಅಫಜಲಪುರ ತಾಲ್ಲೂಕು ಅಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ನಿರಾಣಿ ಅವರು, ಅಲ್ಲಿನ ಸ್ಥಿತಿಗತಿ ಬಗ್ಗೆ ಖುದ್ದು ಮಾಹಿತಿ ಪಡೆದರು.
ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ಹಾಸಿಗೆ, ಐಸಿಯೂ ಬೆಡ್, ಲಸಿಕೆ, ಔಷಧಿ, ಅಕ್ಸಿಜನ್ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳು ಇರಬೇಕೆಂದು ವೈದ್ಯಧಿಕಾರಿಗಳಿಗೆ ತಾಕೀತು ಮಾಡಿದರು.
ಸೇಡಂನಿಂದ ನೇರವಾಗಿ ಕಲಬುರಗಿಗೆ ಆಗಮಿಸಿದ ಅವರು, ಶ್ರೀ ಸ್ವಾಮಿನಾರಾಯಣ ಗುರುಕುಲ ಇಂಟರ್ ನ್ಯಾಶನಲ್ ಸ್ಕೂಲ್ ವತಿಯಿಂದ ತೆರೆದಿರುವ 150 ಹಾಸಿಗೆಯ ಸಾಮಾಥ್ರ್ಯ೯ದ ಕೋವಿಡ್ ಕೇರ್ ಸೆಂಟರ್ ಅನ್ನು ಸಾರ್ವಜನಿಕರ ಸೇವೆಗೆ ಸಮರ್ಪಿಸಿದರು.
ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ, ಕೋವಿಡ್ -19 ನಿಯಂತ್ರಣ ಹಾಗೂ ವೈದ್ಯಕೀಯ ಸೋಂಕಿತರಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಭಿಪ್ರಾಯ ಪಡೆದರು. ಇಂದು ಸಂವಾದದಲ್ಲಿ ಪಾಲ್ಗೊಂಡು ನಂತರ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯಲ್ಲಿ ತೆಗೆದುಕೊಂಡಿರುವ ಹಾಗೂ ಮುಂದೆ ತೆಗೆದುಕೊಳ್ಳಲಿರುವ ಕ್ರಮಗಳ ಕುರಿತಾಗಿ ಮಾಧ್ಯಮಗಳ ಮುಂದೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.