ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಶಂಕರ್ ರಾವ್ ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿವೆ.
ಪಾಪ ಪಾಂಡು ಧಾರಾವಾಹಿ ಮೂಲಕ ಹೆಚ್ಚಿನ ಹೆಸರುಗಳಿಸಿದ ಅವರು ಅನೇಕ ಸಿನಿಮಾಗಳಲ್ಲೂ ಅಭಿನಯಿಸಿದ್ದರು. ನಟರಂಗ ತಂಡದೊಂದಿಗೆ ಗುರುತಿಸಿಕೊಂಡಿದ್ದ ಶಂಕರ್ ರಾವ್ ಅವರು, ಹವ್ಯಾಸಿ ರಂಗಭೂಮಿ ಕಲಾವಿದರಾಗಿ ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದರು. ಅಪ್ಪು, ಧ್ರುವ, ಖುಷಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪ್ರಮುಖ ಪಾತ್ರದಲ್ಲಿ ಇವರು ಕಾಣಿಸಿಕೊಂಡಿದ್ದರು.