ಮಂಗಳೂರು: ಕರಾವಳಿಯಲ್ಲಿರುವ ಆಸ್ತಿಕರ ಪಾಲಿಗೆ ದಕ್ಷಿಣ ಕಾಶಿ ಎಂದೇ ಗುರುತಾಗಿರುವ ಕಾರಿಂಜೇಶ್ವರ ಕ್ಷೇತ್ರ ಪ್ರಕೃತಿಯ ಸುಂದರ ಉಡುಗೊರೆಯಲ್ಲದೆ ಬೇರೇನೂ ಅಲ್ಲ. ಮುಗಿಲೆತ್ತರದ ಈ ಏಕಶಿಲಾ ಬೆಟ್ಟದ ಮೇಲೆ ಪರಮೇಶ್ವರ ಸಾನ್ನಿಧ್ಯವಹಿಸಿದ್ದು ಈ ಪುಣ್ಯಕ್ಷೇತ್ರ ಭಕ್ತರ ಪಾಲಿನ ಸ್ವರ್ಗ.
ಬೆಟ್ಟಹತ್ತಿ ದೇಗುಲಕ್ಕೆ ತೆರಳುವುದೇ ಸಾಹಸ. ಗರ್ಭಗುಡಿಯೊಳಗಿನ ಕಾರಿಂಜೇಶ್ವರನನ್ನು ಕಂಡಾಗ ಅದೇನೋ ಪುನೀತ ಭಾವ. ಈ ಅನುಭವ ಇತರೆಡೆಗಳಿಗಿಂತ ವಿಭಿನ್ನ ಎಂಬುದು ಹಲವರ ಅಭಿಪ್ರಾಯ.
ಶ್ರೀ ಕಾರಿಂಜೇಶ್ವರ ಕ್ಷೇತ್ರವು ‘ಬೆಟ್ಟ ಒಂದು: ಹಲವು ಜಗತ್ತು’ ಎಂಬಂತಿದೆ. ರಾಮಾಯಣ ಮಹಾಭಾರತ ಕಾಲದ ಹಲವು ಪುರಾಣ ಪ್ರಸಂಗಗಳಿಗೆ ಈ ಕ್ಷೇತ್ರ ಸಾಕ್ಷಿಯಾಗಿದೆ ಎಂಬುದು ಹಲವರ ನಂಬಿಕೆ. ಬೇಸಿಗೆಯ ಬಿರುಬಿಸಿಲ ಕಾಲದಲ್ಲೂ ‘ಉಂಗುಷ್ಠ ತೀರ್ಥ’ದ ಪುಟ್ಟ ಗುಂಡಿಯಲ್ಲಿ ಜೀವಜಲ ಸಿಗುವ ಮಹಿಮೆಯೂ ಭಕ್ತರ ಕುತೂಹಲದ ಕೇಂದ್ರಬಿಂದು.
![]()
ಅದರಲ್ಲೂ ಮಳೆಗಾಲ ಕಳೆದಾಕ್ಷಣದ ಚುಮುಚುಮು ಚಳಿಯ ಕಾಲದಲ್ಲಿ, ಬೆಳ್ಳಂಬೆಳಿಗ್ಗೆ ಬೆಟ್ಟದೆತ್ತರದಲ್ಲಿ ಸಾಗುವ ಮೋಡಗಳ ಸಾಲನ್ನು ನೋಡುವುದೇ ಚೆಂದ. ಬೆಟ್ಟಕ್ಕೆ ಶ್ವೇತ ಹೊದಿಕೆಯಾಗುವ ಮೋಡಗಳ ಎಡೆಯಲ್ಲಿ ಅವಿತ ಅನುಭವವೂ ಬೆಟ್ಟವೇರಿದ ಮಂದಿಗೆ ಸೊಗಸು.. ಆ ಕ್ಷಣದ ದೃಶ್ಯ ವೈಭವವೂ ಅನನ್ಯ..
Sri Karinjeshwara Temple is a famous Lord Shiva temple perched on the top of a peak in the village of Karinja
It offers a magnificent view of the surroundings from the top of a hill
📍Bantwal taluk, Dakshina Kannada district pic.twitter.com/VVfplgBxqb
— Dr Durgaprasad Hegde (@DpHegde) October 22, 2022






















































ಬೆಟ್ಟಹತ್ತಿ ದೇಗುಲಕ್ಕೆ ತೆರಳುವುದೇ ಸಾಹಸ. ಗರ್ಭಗುಡಿಯೊಳಗಿನ ಕಾರಿಂಜೇಶ್ವರನನ್ನು ಕಂಡಾಗ ಅದೇನೋ ಪುನೀತ ಭಾವ. ಈ ಅನುಭವ ಇತರೆಡೆಗಳಿಗಿಂತ ವಿಭಿನ್ನ ಎಂಬುದು ಹಲವರ ಅಭಿಪ್ರಾಯ.
