ಬೆಂಗಳೂರು: ಕರ್ನಾಟಕ ಹೈಕೋರ್ಟಿನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಲೆ ಅವರು ಅಧಿಕಾರವಹಿಸಿಕೊಳ್ಳಲಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಬಿ.ಲಲಿತ್ ಅವರನ್ನೊಳಗೊಂಡ ಸಮಿತಿಯು ಪಿ.ಬಿ.ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನೇಮಕ ಮಾಡುವ ಕುರಿತು ಅಂತಿಮ ತೀರ್ಮಾನ ಕೈಗೊಂಡಿದೆ.
ಮಹಾರಾಷ್ಟ್ರ ಹೈಕೋರ್ಟ್ ನ್ಯಾಯಮೂರ್ತಿಯಾಗಿರುವ ಪಿ.ಬಿ.ವರಾಲೆ ಅವರು 1985ರಿಂದಲೇ ನ್ಯಾಯಾಂಗ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಾಂಬೆ ಹೈಕೋರ್ಟಿನ ಹಿರಿಯ ನ್ಯಾಯಮೂರ್ತಿಯಾಗಿರುವ ಇವರು ಕಾನೂನು ಮಹಾವಿದ್ಯಾಲಯಗಳಲ್ಲೂ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸಿದ ಅನುಭವಿ. 2008ರಲ್ಲಿ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾದ ಪಿ.ಬಿ.ವರಾಲೆ ಅವರು, ಇನ್ನು ಮುಂದೆ ಕರ್ನಾಟಕ ಹೈಕೋರ್ಟ್ನ್ನು ಮುನ್ನಡೆಸಲಿದ್ದಾರೆ.