ಬೆಂಗಳೂರು: ಲೋಕಸಭೆ ಚುನಾವಣೆ ಇದೀಗ ಕ್ಲೈಮಾಕ್ಸ್ ಘಟ್ಟದಲ್ಲಿದ್ದು, ದೇಶದಲ್ಲಿ ಮೂರನೇ ಹಂತದ ಮತದಾನ ಮಂಗಳವಾರ ನಡೆಯಲಿದೆ. ಶಾಂತಿಯುತ ಮತದಾನಕ್ಕಾಗಿ ಸಕಲ ತಯಾರಿ ನಡೆದಿದ್ದು, ಮೂರನೇ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ದೇಶದಲ್ಲಿ ಮೂರನೇ ಹಂತವಾಗಿದ್ದರೂ ಕರ್ನಾಟಕದಲ್ಲಿ ಇದು ಎರಡನೇ ಹಂತ ಮತದಾನ. 14 ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಮತಯಂತ್ರ, ವಿವಿ ಪಾಟ್ ಗಳನ್ನು ಮತದಾನ ಕೇಂದ್ರಗಳಿಗೆ ರವಾನೆಯಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.